ಮಹಾರಾಷ್ಟ್ರ ರಾಜಕೀಯದಲ್ಲಿ ಅದಾನಿ ಮಧ್ಯಪ್ರವೇಶ: ಖರ್ಗೆ ಕಿಡಿ

ಹೆಚ್ಚಿನ ಸಂಖ್ಯೆಯ ಜನರು ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಲ್ಲಿ ಉದ್ಯೋಗ ಪಡೆಯುವುದರಿಂದ ಸರ್ಕಾರ ಅಂತಹ ಕೈಗಾರಿಕೆಗಳನ್ನು ಬೆಂಬಲಿಸಬೇಕು.
kharge
ಮಲ್ಲಿಕಾರ್ಜುನ ಖರ್ಗೆ
Updated on

ಕಲಬುರಗಿ: ಮಹಾರಾಷ್ಟ್ರ ರಾಜಕೀಯದಲ್ಲಿ ಮಧ್ಯಪ್ರವೇಶಿಸಲು ಅದಾನಿ ಯಾರು? ಅವರು ಯಾವ ಕೆಲಸ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಗುರುವಾರ ಕಿಡಿಕಾರಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, ಮಹಾರಾಷ್ಟ್ರ ರಾಜಕೀಯದಲ್ಲಿ ಅದಾನಿ ಮಧ್ಯ ಪ್ರವೇಶಿಸುತ್ತಿದ್ದು, ಅವರನ್ನು ಪ್ರಧಾನಿ ಮೋದಿ ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಲ್ಲಿ ಉದ್ಯೋಗ ಪಡೆಯುವುದರಿಂದ ಸರ್ಕಾರ ಅಂತಹ ಕೈಗಾರಿಕೆಗಳನ್ನು ಬೆಂಬಲಿಸಬೇಕು. ಆದರೆ, ಎನ್ ಡಿಎ ಸರ್ಕಾರ ಪ್ರತ್ಯೇಕ್ಷ, ಪರೋಕ್ಷವಾಗಿ ದೇಣಿಗೆ ಪಡೆಯಲು ಕಾರ್ಪೋರೇಟ್ ಕಂಪನಿಗಳನ್ನು ಬೆಂಬಲಿಸುತ್ತಿದೆ. ಹೀಗಾಗಿ ಅದಾನಿ ರಾಜಕೀಯದಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಮೀಸಲಾತಿ’ ವಿಚಾರದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ಕುರಿತು ಕಿಡಿಕಾರಿದ ಖರ್ಗೆ, ಮೀಸಲಾತಿ ಬಗ್ಗೆ ಮಾತನಾಡಲು ಅವರು ಯಾರು ಎಂದು ಕೇಳಿದರು. ಸಂವಿಧಾನವೇ ಮೀಸಲಾತಿಯ ಹಕ್ಕನ್ನು ನೀಡಿದೆ. ಯಾರೂ ಅದಕ್ಕೆ ಪರ್ಯಾಯವಾಗಿ ಅಥವಾ ಬದಲಾಯಿಸಲು ಸಾಧ್ಯವಿಲ್ಲ. ಸಂವಿಧಾನ ಮತ್ತು ರಾಷ್ಟ್ರ ಧ್ವಜವನ್ನು ಒಪ್ಪುವುದಿಲ್ಲ ಎಂದು ಬಿಜೆಪಿ ಮತ್ತು ಆರೆಸ್ಸೆಸ್ ಈ ಹಿಂದೆ ಹಲವು ಬಾರಿ ಹೇಳಿವೆ ಎಂದು ಖರ್ಗೆ ಹೇಳಿದರು.

ಕಾಂಗ್ರೆಸ್ ಪಕ್ಷ ಜನ ಕಲ್ಯಾಣಕ್ಕೆ ಆದ್ಯತೆ ನೀಡುತ್ತಿದ್ದು, ಜನರಿಗೆ ಅನುಕೂಲವಾಗುವ ನೀತಿಗಳನ್ನು ಜಾರಿಗೊಳಿಸುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳ ಅನುಷ್ಠಾನ ಮತ್ತು ಅವುಗಳ ಅನುಷ್ಠಾನವು ಕಾಂಗ್ರೆಸ್ ಪಕ್ಷದ ಬದ್ಧತೆಗೆ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ನಮ್ಮ ಬದ್ಧತೆಯ ಬಗ್ಗೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ತಿಳಿಸಲು ಕಾಂಗ್ರೆಸ್ ಪಕ್ಷಕ್ಕೆ ಮಾದರಿಯಾಗಿದೆ. ಬಿಜೆಪಿ ಧರ್ಮ ಆಧಾರಿತ ರಾಜಕಾರಣಕ್ಕೆ ಪ್ರಾಮುಖ್ಯತೆ ನೀಡುತ್ತಿದೆ ಎಂಬುದು ಜನರಿಗೆ ತಿಳಿದಿದೆ ಮತ್ತು ಧರ್ಮದ ಆಧಾರದ ಮೇಲೆ ಜನರನ್ನು ಓಲೈಸಲು ಪ್ರಯತ್ನಿಸುತ್ತಿದೆ. ಆದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.

kharge
ಇಂದಿರಾ ಗಾಂಧಿ ಮರಳಿ ಬಂದರೂ ಆರ್ಟಿಕಲ್ 370 ಮರುಸ್ಥಾಪನೆ ಆಗಲ್ಲ: ಅಮಿತ್ ಶಾ

ನಾನು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಈಗಾಗಲೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಪ್ರವಾಸ ಮಾಡಿದ್ದೇವೆ, ಜನರ ಪ್ರತಿಕ್ರಿಯೆ ಸಕಾರಾತ್ಮಕವಾಗಿದೆ. ಇಂದು ಮಹಾರಾಷ್ಟ್ರದ ಕೆಲವು ಸ್ಥಳಗಳಿಗೆ ಮತ್ತು ಶುಕ್ರವಾರ ಜಾರ್ಖಂಡ್‌ನ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ. ಶನಿವಾರ ಮತ್ತೆ ಕೆಲವೆಡೆ ಪ್ರಚಾರ ಮುಂದುವರಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com