ವಕ್ಫ್ ವಿವಾದ: ನೈಜ ವರದಿ ಸಂಗ್ರಹಿಸಲು ಬಿಜೆಪಿ ಮೂರು ತಂಡ ರಚನೆ!

'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.
BY Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ಇತ್ತೀಚಿಗೆ ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿ 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.

ಬಿ. ವೈ. ವಿಜಯೇಂದ್ರ ನೇತೃತ್ವದ ಮೊದಲ ತಂಡದಲ್ಲಿ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಭಗವಂತ ಖೂಬಾ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುರುಗೇಶ್ ನಿರಾಣಿ, ಬಿ. ಶ್ರೀರಾಮುಲು, ರಮೇಶ್ ಜಾರಕಿಹೊಳಿ, ಈರಣ್ಣ ಕಡಾಡಿ, ಹಾಲಪ್ಪ ಆಚಾರ್, ಸುನೀಲ್ ವಲ್ಲಾಪುರೆ ಮತ್ತು ವಕೀಲ ಎಂ.ಜಿ. ಜಿರಲಿ ಇದ್ದಾರೆ. ಈ ತಂಡಕ್ಕೆ ಪಿ. ರಾಜೀವ್ ಸಂಚಾಲಕರಾಗಿದ್ದು, ಅರುಣ್ ಶಹಾಪುರ, ಹರೀಶ್ ಪೂಂಜಾ ಮತ್ತು ಡಾ. ಶೈಲೇಂದ್ರ ಬೆಲ್ಲಾಳ ಸಂಯೋಜಕರಾಗಿದ್ದಾರೆ.

ಈ ತಂಡ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು,ಕೊಪ್ಪಳ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಎರಡನೇ ತಂಡದಲ್ಲಿ ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ, ರಾಜೂಗೌಡ, ಎಂಪಿ ರೇಣುಕಾಚಾರ್ಯ, ಎನ್. ಮಹೇಶ್, ದೊಡ್ಡನ ಗೌಡ ಪಾಟೀಲ್, ಭಾರತಿ ಶೆಟ್ಟಿ, ಡಾ. ಬಿ. ಸಿ. ನವೀನ್ ಕುಮಾರ್ ಮತ್ತು ವಕೀಲ ವಸಂತ್ ಕುಮಾರ್ ಇದ್ದಾರೆ. ಇದಕ್ಕೆ ಪ್ರೀತಂಗೌಡ ಸಂಚಾಲಕರಾಗಿದ್ದು, ವಿನಯ್ ಬಿದರೆ, ಡಿ.ಎಸ್. ಅರುಣ್ , ಲಕ್ಷ್ಮಿ ಅಶ್ವಿನಿಗೌಡ ಸಂಯೋಜಕರಾಗಿದ್ದಾರೆ.

ಈ ತಂಡ ಚಾಮರಾಜನಗರ, ಮೈಸೂರು ನಗರ, ಗ್ರಾಂ. ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

BY Vijayendra
ವಕ್ಫ್ ವಿವಾದ: ರೈತ ಚನ್ನಪ್ಪ ಬಾಳಿಕಾಯಿ ಮನೆಗೆ BJP ನಿಯೋಗ ಭೇಟಿ, ಒಗ್ಗಟ್ಟು ಪ್ರದರ್ಶನ

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಎರಡನೇ ತಂಡದಲ್ಲಿ ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ, ರಾಜೂಗೌಡ, ಎಂಪಿ ರೇಣುಕಾಚಾರ್ಯ, ಎನ್. ಮಹೇಶ್, ದೊಡ್ಡನ ಗೌಡ ಪಾಟೀಲ್, ಭಾರತಿ ಶೆಟ್ಟಿ, ಡಾ. ಬಿ. ಸಿ. ನವೀನ್ ಕುಮಾರ್ ಮತ್ತು ವಕೀಲ ವಸಂತ್ ಕುಮಾರ್ ಇದ್ದಾರೆ. ಇದಕ್ಕೆ ಪ್ರೀತಂಗೌಡ ಸಂಚಾಲಕರಾಗಿದ್ದು, ವಿನಯ್ ಬಿದರೆ, ಡಿ.ಎಸ್. ಅರುಣ್ , ಲಕ್ಷ್ಮಿ ಅಶ್ವಿನಿಗೌಡ ಸಂಯೋಜಕರಾಗಿದ್ದಾರೆ.

ಈ ತಂಡ ಚಾಮರಾಜನಗರ, ಮೈಸೂರು ನಗರ, ಗ್ರಾಂ. ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com