ವಕ್ಫ್ ವಿವಾದ: ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಗಳಲ್ಲಿ BJP ಹೋರಾಟ

ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದ್ದಾರೆ.
ಬಿ.ವೈ. ವಿಜಯೇಂದ್ರ, ಸಿಟಿ ರವಿ ಮತ್ತಿತರರು
ಬಿ.ವೈ. ವಿಜಯೇಂದ್ರ, ಸಿಟಿ ರವಿ ಮತ್ತಿತರರು
Updated on

ಬೆಂಗಳೂರು: ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನವೆಂಬರ್ 21 ಅಥವಾ 22ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು, ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದ್ದಾರೆ.

ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದ ಮೂರು ತಂಡಗಳಲ್ಲಿ ರಾಜ್ಯದ ಕೇಂದ್ರ ಸಚಿವರು, ಮಾಜಿ ಸಿಎಂಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮುಖಂಡರು ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರನ್ನು ಬೆಳಿಗ್ಗೆಯಿಂದ ಸಂಜೆತನಕ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡುತ್ತೇವೆ ಎಂದು ಹೇಳಿದರು.

ಬಿ.ವೈ. ವಿಜಯೇಂದ್ರ, ಸಿಟಿ ರವಿ ಮತ್ತಿತರರು
ವಕ್ಫ್ ವಿವಾದ: ನೈಜ ವರದಿ ಸಂಗ್ರಹಿಸಲು ಬಿಜೆಪಿ ಮೂರು ತಂಡ ರಚನೆ!

ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ನೈಜ ವರದಿಯನ್ನು ತರಲಿದ್ದೇವೆ ಎಂದು ತಿಳಿಸಿದರು.

ಕೇಂದ್ರದ 3 ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿಯವರು ಸೇರಿ ಪ್ರಮುಖ ನಾಯಕರು ಇರುವ ಪ್ರತಿ ತಂಡವು ಕನಿಷ್ಠ 8-10 ಜಿಲ್ಲೆಗಳನ್ನು ಪ್ರವಾಸ ಮಾಡಲಿದೆ. ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸದನದಲ್ಲಿ ವಾಸ್ತವಿಕ ಸಮಸ್ಯೆಗಳ ಕಡೆ ಬೆಳಕು ಚೆಲ್ಲುವ ಕೆಲಸ ಮಾಡಲಿದೆ. ಡಿಸೆಂಬರ್ ಮೊದಲ ವಾರದಿಂದ ಈ ಪ್ರವಾಸ ಇರುತ್ತದೆ ಎಂದು ಮಾಹಿತಿ ನೀಡಿದರು.

ಬೆಳಗಾವಿ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನೂ ಆಯೋಜಿಸಲಾಗುತ್ತಿದ್ದು, ಸುಮಾರು 50ರಿಂದ 60 ಸಾವಿರ ಸಾರ್ವಜನಿಕರು, ರೈತರನ್ನು ಸೇರಿಸಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಏರ್ಪಡಿಸುತ್ತೇವೆ. ಪ್ರತಿ ಜಿಲ್ಲೆ, ಹೋಬಳಿ, ಪಂಚಾಯಿತಿ ಮಟ್ಟದಲ್ಲಿ ವಕ್ಫ್ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆಂದು ವಿವರಿಸಿದರು.

ಇದೇ ವೇಳೆ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯ ನಾಯಕರಾಗಿದ್ದು, ಜಿಲ್ಲೆಗಳಿಗೆ ಭೇಟಿ ನೀಡುವ ತಂಡಗಳಲ್ಲಿ ಅವರೂ ಇದ್ದಾರೆ. ಪಕ್ಷದ ಶಾಸಕರು, ಸಂಸದರು, ಮಾಜಿ ಶಾಸಕರು, ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com