ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಶೀಘ್ರ ಮೇಲ್ಮನವಿ: ಪೊಲೀಸ್ ಆಯುಕ್ತ ದಯಾನಂದ

ದರ್ಶನ್‌ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.
Actor Darshan
ನಟ ದರ್ಶನ್
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್ ತೂಗುದೀಪ ಅವರಿಗೆ ಬಿಗ್‌ ಶಾಕ್‌ ನೀಡಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ದರ್ಶನ್‌ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ನಿಂದ ವೈದ್ಯಕೀಯ ಕಾರಣಗಳಿಗಾಗಿ ಆರು ವಾರಗಳವರೆಗೆ ಮಧ್ಯಂತರ ಜಾಮೀನು ಪಡೆದಿರುವ 47 ವರ್ಷದ ನಟ ದರ್ಶನ್ ಅವರು ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು.

Actor Darshan
ನಟ ದರ್ಶನ್ ಗೆ ಮಧ್ಯಂತರ ಜಾಮೀನು: ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ- ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್

ಆದಷ್ಟು ಬೇಗ ನಾವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಬಿ ದಯಾನಂದ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಟ ದರ್ಶನ್‌ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅಗತ್ಯ ದಾಖಲೆ, ಕಾಗದ ಪತ್ರಗಳನ್ನು ಸಿದ್ಧಪಡೆಸಿಕೊಳ್ಳಲಾಗುತ್ತಿದೆ. ಮುಖ್ಯವಾಗಿ ಚಾರ್ಜ್‌ಶೀಟ್‌ ಅನ್ನು ಭಾಷಾಂತರ ಮಾಡುವ ಕೆಲಸ ನಡೆದಿದೆ. ಶೀಘ್ರದಲ್ಲಿಯೇ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಆರೋಪಿಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com