ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು: ಉಪಚುನಾವಣೆ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಹಾಗೂ ಶಿಗ್ಗಾಂವಿಯಲ್ಲೂ ಯಾಸಿರ್‌ ಖಾನ್‌ ಪಠಾಣ್‌ ಗೆಲುವಿನ ನಗೆ ಬೀರಿದ್ದಾರೆ.
ಕಾಂಗ್ರೆಸ್
ಕಾಂಗ್ರೆಸ್
Updated on

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯ ಪಟ್ಟಿದೆ.

ಕಾಂಗ್ರೆಸ್
Karnataka Bypoll Results 2024 LIVE Updates: ಮೂರು ಕ್ಷೇತ್ರಗಳೂ ಕಾಂಗ್ರೆಸ್ ಪಾಲು; ಚನ್ನಪಟ್ಟಣದಲ್ಲಿ ಸೈನಿಕನಿಗೆ ಗೆಲುವು; ನಿಖಿಲ್ ಗೆ ಹ್ಯಾಟ್ರಿಕ್ ಸೋಲು

ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಹಾಗೂ ಶಿಗ್ಗಾಂವಿಯಲ್ಲೂ ಯಾಸಿರ್‌ ಖಾನ್‌ ಪಠಾಣ್‌ ಗೆಲುವಿನ ನಗೆ ಬೀರಿದ್ದಾರೆ.

ಫಲಿತಾಂಶಕ್ಕೂ ಮುನ್ನ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಅದರಂತೆ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com