ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ.. ಯಾವಾಗ? ಎಲ್ಲಿ? ಹವಾಮಾನ ಇಲಾಖೆ ಹೇಳಿದ್ದೇನು?
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದ್ದು, ಪರಿಣಾಮ ಕರ್ನಾಟಕದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು.. ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದೆ.
ನವೆಂಬರ್ 27ರಿಂದ ಮಳೆ
ಹವಾಮಾನ ಇಲಾಖೆ ಮೂಲಗಳ ಪ್ರಕಾರ, ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ವಿಶೇಷವಾಗಿ ಜಾಗತಿಕ ಮುನ್ಸೂಚನೆ ವ್ಯವಸ್ಥೆ (GFS), ಹವಾಮಾನ ವ್ಯವಸ್ಥೆಯು ಶುಕ್ರವಾರ, ನವೆಂಬರ್ 29 ರಂದು ಬೆಂಗಳೂರಿನ ಮೇಲೆ ನೇರವಾಗಿ ಹಾದುಹೋಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅಂತೆಯೇ ದಕ್ಷಿಣ ಕನ್ನಡ ಘಟ್ಟಗಳ ಉದ್ದಕ್ಕೂ ಮಳೆ ಮುಂದುವರಿಯುತ್ತದೆ. GFS ಮುನ್ಸೂಚನೆಗಳು ಯಾವಾಗಲೂ ನಿಖರವಾಗಿಲ್ಲದಿದ್ದರೂ, ಮುನ್ಸೂಚನೆಯು ನವೆಂಬರ್ 29 ಮತ್ತು 30 ರಂದು ಕೊಡಗು, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡದಂತಹ ಪ್ರದೇಶಗಳಲ್ಲಿ ಸಂಭವನೀಯ ಮಳೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ