ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ

ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ಬಹಿರಂಗಪಡಿಸಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಕೇಸ್ ದಾಖಲಾಗಿದ್ದ ರೌಡಿ ಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಅಪರಾಧ ನಿಯಂತ್ರಣ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಎದುರಾಳಿ ಗ್ಯಾಂಗ್‌ಗಳ ಸದಸ್ಯರ ಮೇಲೆ ದಾಳಿ ಮಾಡುವ ಆತನ ಸಂಚನ್ನು ಸಹ ವಿಫಲಗೊಳಿಸಲಾಗಿದೆ.

ಬಾವಕ್ಕ ಅಲಿಯಾಸ್ ಅಬೂಬಕರ್ ಅವರ ಪುತ್ರ ಮತ್ತು ಉಳ್ಳಾಲದ ಧರ್ಮ ನಗರದ ನಿವಾಸಿ ದಾವೂದ್ ಶುಕ್ರವಾರ ತಲಪಾಡಿ-ದೇವಿಪುರ ರಸ್ತೆ ಬಳಿ ಎದುರಾಳಿ ತಂಡದ ಸದಸ್ಯರ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರೇಂದ್ರ ನೇತೃತ್ವದ ತಂಡ ದಾವೂದ್ ನನ್ನು ಬಂಧಿಸಲು ಯತ್ನಿಸಿದಾಗ ಆತ ಅಧಿಕಾರಿಗಳ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದು, ನರೇಂದ್ರ ಮತ್ತು ಇತರರನ್ನು ಗಾಯಗೊಳಿಸಿದ್ದಾರೆ. ಹೀಗಿದ್ದರೂ ತಂಡ ಆತನನ್ನು ಉಳ್ಳಾಲ ಠಾಣೆಗೆ ಸ್ಥಳಾಂತರ ಮಾಡಿದೆ. ದಾವೂದ್ ಈಗ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352, 109(1), 121(1), 121(2), 115(2), 132, 3(5), ಮತ್ತು 351(1) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾನೆ.

Casual Images
ಬೆಂಗಳೂರು: ಹನಿಟ್ರ್ಯಾಪ್ ಮಾಡಿ 2 ಕೋಟಿ ರೂ ಗೂ ಅಧಿಕ ಹಣ ವಸೂಲಿ; ಜಿಮ್ ಮಾಲೀಕ ಸೇರಿ ಮೂವರ ಬಂಧನ

ದಾವೂದ್ ಕೊಲೆ ಸೇರಿದಂತೆ ಹಲವಾರು ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ದಾಖಲೆ ಹೊಂದಿದ್ದು, ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com