ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ ಭೂಮಿಯನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು.
D K Shivakumar-Siddaramaiah
ಡಿ ಕೆ ಶಿವಕುಮಾರ್-ಸಿದ್ದರಾಮಯ್ಯ
Updated on

ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.

ಸಚಿವ ಈಶ್ವರ ಬಿ ಖಂಡ್ರೆ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ ಭೂಮಿಯನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು. ನಿವೇಶನ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಡಿ ಮನೆ ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ಅಧಿಕಾರಿಗಳು ಮೈಸೂರಿನಲ್ಲಿ 2,963 ಕುಟುಂಬಗಳಿಗೆ ನಿವೇಶನ ಇಲ್ಲದಿರುವುದು, 1,222 ಕುಟುಂಬಗಳಿಗೆ ನಿವೇಶನಗಳಿವೆ, ಆದರೆ, ಮನೆಗಳಿಲ್ಲ. ಚಾಮರಾಜನಗರದಲ್ಲಿ 5,164 ಕುಟುಂಬಗಳು ಶಾಶ್ವತ ಮನೆಗಳನ್ನು ಹೊಂದಿವೆ. 234 ಕುಟುಂಬಗಳಿಗೆ ನಿವೇಶನ ಇಲ್ಲ, 2,761 ಕುಟುಂಬಗಳು ನಿವೇಶನ ಹೊಂದಿದ್ದರೂ ಮನೆಗಳಿಲ್ಲ, ಕೊಡಗಿನಲ್ಲಿ 2,882 ಕುಟುಂಬಗಳು ಶಾಶ್ವತ ಮನೆಗಳನ್ನು ಹೊಂದಿವೆ. ಅಲ್ಲದೆ, 1,050 ಕುಟುಂಬಗಳಿಗೆ ನಿವೇಶನಗಳಿಲ್ಲ ಮತ್ತು 1,182 ಕುಟುಂಬಗಳಿಗೆ ಮನೆಗಳಿಲ್ಲ ಎಂದು ಮಾಹಿತಿ ನೀಡಿದರು.

D K Shivakumar-Siddaramaiah
ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು: ನಿರಾಸೆಗೊಂಡ ಚಿಣ್ಣರು

ಮೈಸೂರು ವಿಭಾಗದಲ್ಲಿ ಅರಣ್ಯದ ಅಂಚಿನಲ್ಲಿರುವ 194 ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಬಗ್ಗೆ ಸಿಎಂ ಗಮನಕ್ಕೆ ತಂದರು. ಅರಣ್ಯದೊಳಗಿನ 21 ಕುಗ್ರಾಮಗಳ ಪೈಕಿ ಮೂರಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಹೇಳಿದರು.ಈ ವೇಳೆ ಮುಖ್ಯಮಂತ್ರಿಗಳು ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ಅರ್ಹರಿಗೆ ಹಕ್ಕುಪತ್ರ ನೀಡುವಂತೆ ಸೂಚಿಸಿದರು.

ಅರಣ್ಯ ಇಲಾಖೆಯು ಅರಣ್ಯ ಹಕ್ಕು ಕಾಯ್ದೆಯಡಿ ಹಲವರನ್ನು 12,222 ಅರ್ಜಿಗಳನ್ನು ಸ್ವೀಕರಿಸಿದ್ದು, ಇಲ್ಲಿಯವರೆಗೆ 4,856 ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, 6,363 ಎಕರೆ ಭೂಮಿಯನ್ನು ವಿತರಿಸಲಾಗಿದೆ. ಪಾರಂಪರಿಕ ಅರಣ್ಯವಾಸಿಗಳ ವಿಭಾಗದಲ್ಲಿ 1,626 ಅರ್ಜಿಗಳು ಬಂದಿವೆ. ಇಲಾಖೆಯು 531 ಅರ್ಜಿದಾರರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದೆ. ಇಲಾಖೆಯು ಅರಣ್ಯ ಹಕ್ಕು ಕಾಯ್ದೆಯಡಿ 160 ಅರ್ಜಿದಾರರಿಗೆ 38,117 ಎಕರೆ ಭೂಮಿಯನ್ನು ಮಂಜೂರು ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com