ಮಂಗಳೂರು: ಡಿಸೆಂಬರ್ 3 ರಿಂದ ಎರಡು ದಿನ ಬಹುಸಂಸ್ಕೃತಿ ಉತ್ಸವ

ಕರ್ನಾಟಕದ ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ (ಗೌಡ), ಮತ್ತು ಕೊಡವ, ಯಕ್ಷಗಾನ ಮತ್ತು ಸಂಗೀತ, ನೃತ್ಯ ಅಕಾಡೆಮಿ ಸಹಯೋಗದಲ್ಲಿ ಉತ್ಸವ ನಡೆಸಲಾಗುತ್ತಿದೆ.
DC Mullai Muhilan
ಜಿಲ್ಲಾಧಿಕಾರಿ ಮುಲೈ ಮುಹಿಲನ್
Updated on

ಮಂಗಳೂರು: ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನಲ್ಲಿ ಎರಡು ದಿನಗಳ ಬಹುಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ತಿಳಿಸಿದ್ದಾರೆ.

ಕರ್ನಾಟಕದ ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ (ಗೌಡ), ಮತ್ತು ಕೊಡವ, ಯಕ್ಷಗಾನ ಮತ್ತು ಸಂಗೀತ, ನೃತ್ಯ ಅಕಾಡೆಮಿ ಸಹಯೋಗದಲ್ಲಿ ಉತ್ಸವ ನಡೆಸಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಮಡಿಕೇರಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಬಲದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮವು ರಾಜ್ಯದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸುವ ಗುರಿಯನ್ನು ಹೊಂದಿದೆ.

ಉತ್ಸವದಲ್ಲಿ ಏಳು ಸಾಂಸ್ಕೃತಿಕ ಅಕಾಡೆಮಿಗಳ ತಂಡಗಳಿಂದ ನೃತ್ಯ, ಪುಸ್ತಕ ಪ್ರದರ್ಶನ, ಚಿತ್ರಕಲೆ ಮತ್ತು ಶಿಲ್ಪಕಲೆಗಳ ಪ್ರದರ್ಶನ, ದಕ್ಷಿಣ ಕನ್ನಡ, ಉಡುಪಿ ಮತ್ತು ಮಡಿಕೇರಿಯ ಪಾಕಪದ್ಧತಿಗಳನ್ನು ಪ್ರದರ್ಶಿಸುವ ಆಹಾರ ಉತ್ಸವ ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು.

ಡಿಸೆಂಬರ್ 3 ರಂದು ಬೆಳಗ್ಗೆ 9 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಟೌನ್ ಹಾಲ್ ವರೆಗೆ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಬಹುಸಂಸ್ಕೃತಿಯ ಮೆರವಣಿಗೆಯೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಟೌನ್ ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

DC Mullai Muhilan
ಮಂಗಳೂರು: ಮೂವರ ಬಂಧನ; 1.5 ಲಕ್ಷ ರೂ ಮೊತ್ತದ ಮಾದಕ ವಸ್ತು ವಶ

ಡಿಸೆಂಬರ್ 4 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com