ನಿಷ್ಕ್ರಿಯವಾಗಿರುವ ಕೊಳವೆ ಬಾವಿ ಮುಚ್ಚದಿದ್ದರೆ ಮಾಲೀಕರ ವಿರುದ್ಧ ಕಠಿಣ ಕ್ರಮ: ಎಚ್.ಕೆ ಪಾಟೀಲ್

ಹಲವು ಸ್ಥಳಗಳಲ್ಲಿ ಬೋರ್‌ವೆಲ್ ತೆರೆದಿಡಲಾಗಿದೆ ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ, ಹಾಗಾಗಿ ಅವುಗಳನ್ನು ಮುಚ್ಚಳದಿಂದ ಮುಚ್ಚುವಂತೆ ಸೂಚಿಸಲಾಗುತ್ತದೆ.
HK patil
ಎಚ್.ಕೆ. ಪಾಟೀಲ್
Updated on

ಬೆಂಗಳೂರು: ತೆರೆದ ಬೋರ್‌ವೆಲ್‌ಗಳಿಗೆ ಮಕ್ಕಳು ಬೀಳುವುದನ್ನು ತಡೆಯಲು ರಾಜ್ಯ ಸರ್ಕಾರ ಕಾನೂನಿಗೆ ತಿದ್ದುಪಡಿ ತಂದು ಅದನ್ನು ಮುಚ್ಚಲು ವಿಫಲರಾದವರಿಗೆ ಒಂದು ವರ್ಷ ಜೈಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮ ಜಾರಿಗೆ ತರುತ್ತಿದೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಸ್ತಾವಿತ ಕರ್ನಾಟಕ ಅಂತರ್ಜಲ (ನಿಯಂತ್ರಣ ಮತ್ತು ಅಭಿವೃದ್ಧಿ ನಿರ್ವಹಣೆಯ ನಿಯಂತ್ರಣ) ತಿದ್ದುಪಡಿ ಮಸೂದೆ 2024ಕ್ಕೆ ಸಂಪುಟ ಅನುಮೋದನೆ ನೀಡಿದೆ. ಹಲವು ಸ್ಥಳಗಳಲ್ಲಿ ಬೋರ್‌ವೆಲ್ ತೆರೆದಿಡಲಾಗಿದೆ ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ, ಹಾಗಾಗಿ ಅವುಗಳನ್ನು ಮುಚ್ಚಳದಿಂದ ಮುಚ್ಚುವಂತೆ ಸೂಚಿಸಲಾಗುತ್ತದೆ.

ಕೆಲವು ವರ್ಷಗಳ ಹಿಂದೆ ಬಾಗಲಕೋಟೆಯಲ್ಲಿ ಮಗುವೊಂದು ಬೋರ್‌ವೆಲ್‌ನಲ್ಲಿ ಬಿದ್ದು ಸಿಲುಕಿಕೊಂಡಿತ್ತು. ಅಂದಿನಿಂದ, ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮಾಲೀಕರು ಕೊಳವೆಬಾವಿ ಕೊರೆದು ವಿಫಲವಾದರೆ ಅವರೇ ಅದನ್ನು ತುಂಬಿಸಬೇಕು. ಕಟ್ಟುನಿಟ್ಟಿನ ಕ್ರಮವನ್ನು ತರಲು ಮತ್ತು ಅಂತಹ ಘಟನೆಗಳನ್ನು ತಪ್ಪಿಸಲು ಮಸೂದೆಯನ್ನು ಪ್ರಸ್ತಾಪಿಸಲಾಗಿದೆ. ಬೋರ್‌ವೆಲ್‌ ಜಮೀನು ಮಾಲೀಕರು, ಬೋರ್‌ವೆಲ್‌ ಮುಚ್ಚದಿದ್ದಲ್ಲಿ ಬೋರ್‌ವೆಲ್‌ ಕೊರೆಯುವ ಏಜೆನ್ಸಿ ಹೊಣೆಯಾಗಲಿದೆ ಎಂದಿದ್ದಾರೆ. ನಿಯಮ ಉಲ್ಲಂಘಿಸುವವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಮತ್ತು 10,000 ರೂ. ದಂಡ ವಿಧಿಸಲಾಗುವುದು. ಅಲ್ಲದೆ, ಅನುಮತಿ ಪಡೆಯದೇ ಬೋರ್‌ವೆಲ್‌ ಕೊರೆದು ಸುರಕ್ಷತಾ ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ಹಾಗೂ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲು ಸೂಚಿಸಲಾಗಿದೆ.

HK patil
ಇಂದು ರಾಜ್ಯ ಸಚಿವ ಸಂಪುಟ ಸಭೆ: ಚಳಿಗಾಲ ಅಧಿವೇಶನ ದಿನಾಂಕ ನಿಗದಿ?

ಒಂಬತ್ತು ಮಸೂದೆಗಳಿಗೆ ಸಂಪುಟ ಅನುಮೋದನೆ ನೀಡಿದೆ.ಕಾರ್ಮಿಕರ ಕಲ್ಯಾಣ ನಿಧಿ ಕಾಯ್ದೆ 1965ಕ್ಕೆ ತಿದ್ದುಪಡಿ ಮಾಡುವ ಮೂಲಕ ಈ ಮೊದಲು ಪ್ರತಿ ಕಾರ್ಮಿಕರಿಂದ 20 ರೂ., ಮಾಲಕರಿಂದ ಕಾರ್ಮಿಕರ ಪಾಲು 40 ರೂ., ಸರಕಾರದಿಂದ ಕಾರ್ಮಿಕರ ಪಾಲು 20 ರೂ.ಗಳನ್ನು ಕಾರ್ಮಿಕ ಕಲ್ಯಾಣ ನಿಧಿಗೆ ಸಂಗ್ರಹಿಸುವುದನ್ನು ಹೆಚ್ಚಿಸಿ ಕಾರ್ಮಿಕರಿಂದ 50 ರೂ., ಮಾಲಕರಿಂದ ಪ್ರತಿ ಕಾರ್ಮಿಕರಿಗೆ 100 ರೂ. ಹಾಗೂ ಸರಕಾರದಿಂದ ಪ್ರತಿ ಕಾರ್ಮಿಕರಿಗೆ 50 ರೂ.ಗಳ ವಂತಿಕೆಯನ್ನು ಹೆಚ್ಚಿಸಲು ಈ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಇದರಿಂದಾಗಿ ಕಾರ್ಮಿಕ ಕಲ್ಯಾಣ ಮಂಡಳಿಯ ವಂತಿಕೆ ಹೆಚ್ಚುವುದರಿಂದ ಸಂಘಟಿತ ಕಾರ್ಮಿಕರು ಮತ್ತು ಅವರ ಕುಟುಂಬದ ಅವಲಂಭಿತರಿಗಾಗಿ ಹಮ್ಮಿಕೊಂಡಿರುವ ಕಲ್ಯಾಣ ಯೋಜನೆಗಳನ್ನು ಸಮರ್ಪಕವಾಗಿ ಹಾಗೂ ಇನ್ನೂ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲು ಅನುಕೂಲವಾಗುತ್ತದೆ. ಪ್ರಸಕ್ತ ವಾರ್ಷಿಕ ವಂತಿಕೆ 42.18 ಕೋಟಿ ರೂ.ಸಂಗ್ರಹವಾಗುತ್ತಿದ್ದು, ತಿದ್ದುಪಡಿ ವಿಧೇಯಕ ಜಾರಿಯಾದ ಬಳಿಕ 100 ಕೋಟಿ ರೂ.ತಲುಪಬಹುದು ಎಂದು ಎಚ್.ಕೆ.ಪಾಟೀಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com