ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನಕ್ಕೆ ವಾರೆಂಟ್

ಎನ್.ಕುಮಾರ್‌ ಎಂಬುವವರು 2015ರಲ್ಲಿ ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು.
ಸ್ನೇಹಮಯಿ ಕೃಷ್ಣ
ಸ್ನೇಹಮಯಿ ಕೃಷ್ಣ
Updated on

ಮೈಸೂರು: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿದೆ.

ಹಳೆಯ ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಅಕ್ಟೋಬರ್‌ 1ರಂದು ಮಂಗಳವಾರ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ.

ಎನ್.ಕುಮಾರ್‌ ಎಂಬುವವರು 2015ರಲ್ಲಿ ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗಧಿ ಪಡಿಸಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 6 ಕ್ಕೆ ಮುಂದೂಡಿದರು. (ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ಅವರಿಗೇ ಇದೀಗ ಸಮಸ್ಯೆ ಎದುರಾಗಿದೆ.

ಸ್ನೇಹಮಯಿ ಕೃಷ್ಣ
ಮುಡಾ ವಿವಾದ ನಡುವೆ ಖರ್ಗೆ ಕುಟುಂಬದ ಟ್ರಸ್ಟ್ ಗೆ KIADB ಜಮೀನು ಹಂಚಿಕೆ ಪ್ರಶ್ನಿಸಿದ ಬಿಜೆಪಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com