ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಇತರರು ಸಾಕ್ಷ್ಯ ನಾಶಕ್ಕೆ ಯತ್ನಿಸುತ್ತಿದ್ದಾರೆ: ಇಡಿ ಕ್ರಮಕ್ಕೆ ಆಗ್ರಹಿಸಿದ ದೂರುದಾರ

ನ್ಯಾಯಾಲಯದ ಅನುಮತಿಯಿಲ್ಲದೆ ಆಸ್ತಿಯ ಸ್ಥಿತಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಕುಮಾರ್ ಇಡಿಗೆ ಪತ್ರ ಬರೆದಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿದಲ್ಲಿ ಪ್ರಕರಣದ ಸಂಪೂರ್ಣ ಸಾಕ್ಷ್ಯಗಳನ್ನು ನಾಶಪಡಿಸಬಹುದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯPTI
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರು ಸಾಕ್ಷ್ಯ ನಾಶಪಡಿಸಲು ಯತ್ನಿಸುತ್ತಿದ್ದಾರೆ ಎಂದು ಮುಡಾ ಪ್ರಕರಣದ ದೂರುದಾರರಲ್ಲಿ ಒಬ್ಬರಾದ ಪ್ರದೀಪ್ ಕುಮಾರ್ ಎಸ್‌ಪಿ ಆರೋಪಿಸಿದ್ದು, ಜಾರಿ ನಿರ್ದೇಶನಾಲಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ವಿಶೇಷ ನ್ಯಾಯಾಲಯದ ಸೆಪ್ಟೆಂಬರ್ 25ರ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27ರಂದು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಒಂದು ದಿನದ ಬಳಿಕ ವಿಶೇಷ ನ್ಯಾಯಾಲಯದ ಆದೇಶ ಹೊರಬಿದ್ದಿತ್ತು. ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ಧ ಇಡಿ ಪೊಲೀಸರು ಎಫ್‌ಐಆರ್‌ಗೆ ಸಮನಾದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿಯನ್ನು (ಇಸಿಐಆರ್) ದಾಖಲಿಸಿತ್ತು.

ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿದ್ದ 14 ನಿವೇಶನಗಳ ಮಾಲೀಕತ್ವ ಮತ್ತು ಸ್ವಾಧೀನವನ್ನು ಬಿಟ್ಟುಕೊಡಲು ಪಾರ್ವತಿ ಅವರು ನಿರ್ಧರಿಸಿದ ಹಿನ್ನೆಲೆಯಲ್ಲಿ ಈ ನಿವೇಶನಗಳ ಮಾರಾಟ ಪತ್ರವನ್ನು ರದ್ದುಪಡಿಸಲು ಮುಡಾ ಆದೇಶಿಸಿದೆ ಎಂದು ಅದರ ಆಯುಕ್ತ ಎಎನ್ ರಘುನಂದನ್ ತಿಳಿಸಿದ್ದಾರೆ.

ನ್ಯಾಯಾಲಯದ ಅನುಮತಿಯಿಲ್ಲದೆ ಆಸ್ತಿಯ ಸ್ಥಿತಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಕುಮಾರ್ ಇಡಿಗೆ ಪತ್ರ ಬರೆದಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿದಲ್ಲಿ ಪ್ರಕರಣದ ಸಂಪೂರ್ಣ ಸಾಕ್ಷ್ಯಗಳನ್ನು ನಾಶಪಡಿಸಬಹುದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡ್ಬೇಕು, ಹಾಗಾದ್ರೆ ಕುಮಾರಸ್ವಾಮಿ ಕೊಡ್ತಾರಾ: ಅಚ್ಚರಿ ಮೂಡಿಸಿದ ಜಿ ಟಿ ದೇವೇಗೌಡ ಹೇಳಿಕೆ

ಪಾರ್ವತಿ ಅವರು ಅಪರಾಧದ ಆದಾಯವನ್ನು ಮುಡಾಕ್ಕೆ ಹಿಂದಿರುಗಿಸಲು ಮುಂದಾಗಿದ್ದಾರೆಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತದೆ ಎಂದು ಕುಮಾರ್ ಹೇಳಿದ್ದು ಅಂತಹ ನಿರ್ಧಾರದ ಆಧಾರದ ಮೇಲೆ ಮುಡಾ ಆಯುಕ್ತರು 14 ನಿವೇಶನಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಬದಲಾಯಿಸಿದ್ದಾರೆ. ತನಿಖೆಯ ಭಾಗವಾಗಿರುವಾಗ ಇದನ್ನು ಮಾಡಲು ಹೇಗೆ ಸಾಧ್ಯ ಎಂದು ಆರೋಪಿಸಿದ್ದಾರೆ.

ಇದು ತನಿಖೆಯಲ್ಲಿ ಗಂಭೀರ ಹಸ್ತಕ್ಷೇಪವಾಗಿದೆ ಮತ್ತು ತನಿಖೆಯನ್ನು ನಿರುಪಯುಕ್ತವಾಗಿಸಲು ಮತ್ತು ಅದನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದು ಈ ವಿಷಯದಲ್ಲಿ ಇಡಿ ಮಧ್ಯಸ್ಥಿಕೆ ವಹಿಸುವಂತೆ ಕೋರಿದ್ದಾರೆ. ಅಪರಾಧದ ನಿವೇಶನಗಳನ್ನು ಬದಲಾಯಿಸಿದ ಮುಡಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಲು ಇಡಿಗೆ ಮನವಿ ಮಾಡಿದ ಅವರು, ಮುಖ್ಯಮಂತ್ರಿ ಕಚೇರಿ ಅಥವಾ ಮುಖ್ಯಮಂತ್ರಿಗಳು ಮುಡಾ ಆಯುಕ್ತರ ಮೇಲೆ ಮತ್ತು ಇತರ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆಯೇ ಎಂದು ವಿಚಾರಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com