ಬೆಂಗಳೂರು: ಮಚ್ಚು ಬೀಸಿ ರಂಪಾಟ, ಮೂವರ ಬಂಧನ

ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ ನಿವಾಸಿಗಳು ಭಯಭೀತರಾಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಖಿನ್ನತೆ ನಿವಾರಕ ಮಾತ್ರೆ ಸೇವಿಸಿ ಮಚ್ಚು ಬೀಸಿ ರಂಪಾಟ ಮಾಡಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ ನಿವಾಸಿಗಳು ಭಯಭೀತರಾಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.

ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧ ಪೂರೈಸಿದ್ದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಔಷಧಾಲಯವೊಂದಕ್ಕೆ ಸೀಲ್ ಮಾಡಲಾಗಿದೆ. ಕಳೆದ ವಾರ ಈ ಘಟನೆ ನಡೆದಿದೆ. ಆರೋಪಿಗಳಾದ ಸೈಯದ್, ಉಸ್ಮಾನ್ ಮತ್ತು ಸಲ್ಮಾನ್ ಅವರನ್ನು ಕರೆತಂದು ಅವರ ಫೋನ್ ಪರಿಶೀಲಿಸಿದಾಗ ಅದರಲ್ಲಿ ಒಂದು ರೀಲ್ಸ್ ಪತ್ತೆಯಾಗಿದೆ.

ಆ ರೀಲ್ಸ್ ನಲ್ಲಿ ಅವರು ಬಿಳಿ ಮಾತ್ರೆ ತೆಗೆದುಕೊಳ್ಳುತ್ತಿರುವುದನ್ನು ಗಮನಿಸಿರುವುದಾಗಿ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಡಿ ದೇವರಾಜ್ ಪಿಟಿಐಗೆ ತಿಳಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ಫಾರ್ಮಸಿಸ್ಟ್ ಔಷಧ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ಸಾಂದರ್ಭಿಕ ಚಿತ್ರ
ಮೈಸೂರಿನಲ್ಲಿ ಸಾರ್ವಜನಿಕವಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ದಂಪತಿ ಬಂಧನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com