ಚಮಚಾಗಿರಿಯ ಭಾಷಣ, ರಾಜಕಾರಣದ ಘಮಲಿನಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್

ದಸರಾ ಇತಿಹಾಸ, ಮಹಾರಾಜರ ಕೊಡುಗೆ,ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ ಎಂದು ಬೇಸರ ಹೊರಹಾಕಿದರು.
ಎಚ್ ವಿಶ್ವನಾಥ್
ಎಚ್ ವಿಶ್ವನಾಥ್
Updated on

ಮೈಸೂರು: ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್ ವಿಶ್ವನಾಥ್ ದೂರಿದಿರು.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜಕೀಯ ಮಾತನಾಡುವ ವೇದಿಕೆ ಆದಾಗಿರಲಿಲ್ಲ. ದಸರಾ ಉದ್ಘಾಟಿಸಿದ ಸಾಹಿತಿ ಹಂಪ ನಾಗರಾಜಯ್ಯ ಅವರೂ ರಾಜಕೀಯ ಭಾಷಣ ಮಾಡಿದ್ದಾರೆ. ದಸರಾ ಇತಿಹಾಸ, ಮಹಾರಾಜರ ಕೊಡುಗೆ,ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ ಎಂದು ಬೇಸರ ಹೊರಹಾಕಿದರು.

ಹಿಂದೆ ಚಾಮುಂಡೇಶ್ವರಿಯ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯ ಈಗ ಪದೇ ಪದೇ ಆ ತಾಯಿಯ ಆಶೀರ್ವಾದ ಬೇಡಿದ್ದಾರೆ. ನಾನೇನೂ ತಪ್ಪು ಮಾಡಿಲ್ಲ ಎಂದು ಪುನರುಚ್ಚರಿಸುತ್ತಿದ್ದಾರೆ. ಇದರ ಅರ್ಥವೇನು ಎಂದು ಪ್ರಶ್ನಿಸಿದರು. ಜೆಡಿಎಸ್‌ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ ಟಿ ದೇವೇಗೌಡರು ಸಿದ್ದರಾಮಯ್ಯ ಅವರನ್ನು ಹೊಗಳಿರುವುದು ಬೂಟಾಟಿಕೆ ತರ ಕಾಣುತ್ತಿದೆ. ಅವರೂ ಮುಡಾ ಫಲಾನುಭವಿಯೇ. ಅಷ್ಟೆಲ್ಲ ಹೊಗಳುವ ಅಗತ್ಯ ಇರಲಿಲ್ಲ ಎಂದರು. ಮುಡಾ ಹಗರಣದ ಬಗ್ಗೆ ಇಷ್ಟು ದಿನ ಮಾತನಾಡದ ಜಿಟಿಡಿ ಈಗ ಏಕೆ ಬಾಯಿ ಬಿಟ್ಟಿದ್ದಾರೆ? ಅವರೂ ಮುಡಾ ಫಲಾನುಭವಿ ಆಗಿರುವುದೇ ಇದಕ್ಕೆ ಕಾರಣ. ಅವರದ್ದೂ ಎಷ್ಟೋ‌ ನಿವೇಶನ ಇವೆ ಎಂಬ ಮಾತುಗಳಿವೆ. ಎಲ್ಲ ರಾಜಕಾರಣಿಗಳೂ ಸೇರಿ ಮೈಸೂರನ್ನು ಕಳ್ಳರ ಸಂತೆಯಂತೆ ಬಿಂಬಿಸಿದ್ದಾರೆ ಎಂದು ಆರೋಪಿಸಿದರು. ಜೆಡಿಎಸ್‌ ಶಾಸಕಾಂಗ ‌ಪಕ್ಷದ ನಾಯಕನನ್ನಾಗಿ ಜಿಟಿಡಿ ಅವರನ್ನು ಮಾಡದಿರುವುದು ಅವರ ಕೋಪಕ್ಕೆ ಮತ್ತೊಂದು ಕಾರಣ. ರಾಜ್ಯ ಸರ್ಕಾರವನ್ನು ಬೀಳಿಸುತ್ತೇವೆ ಎಂದು ಯಾರೂ ಹೇಳಿಲ್ಲ. ಆದರೂ ಮುಖ್ಯಮಂತ್ರಿಯೇ ಆ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಎಚ್ ವಿಶ್ವನಾಥ್
ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು; ಸಿಎಂ, ಡಿಸಿಎಂ ಗರಡಿ ಮನೆ ಆಳಿನಂತೆ ಜಟ್ಟಿಗಳು: ಡಾ ಹಂ.ಪ ನಾಗರಾಜಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com