ಸಚಿವ ಸಂಪುಟ ಸಭೆ ಮಾಡಿ ಜಾತಿಗಣತಿ ಬಗ್ಗೆ ತೀರ್ಮಾನ: ಸಚಿವ G Parameshwar

'ಇದೊಂದು ವಿಚಿತ್ರ ಸಂದರ್ಭ. ಜಾತಿ ಜನಗಣತಿ ಸ್ವೀಕಾರ ಮಾಡಿಲ್ಲ ಅಂದ್ರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ ಈಗ ಮಾಡುತ್ತೀರಿ ಅಂತ ವ್ಯಾಖ್ಯಾನ ಮಾಡ್ತಾರೆ.
G Parameshwar
ಗೃಹ ಸಚಿವ ಜಿ ಪರಮೇಶ್ವರ
Updated on

ಬೆಂಗಳೂರು: ಜಾತಿಗಣತಿ ಕುರಿತಂತೆ ಸಚಿವ ಸಂಪುಟ ಸಭೆ ಮಾಡಿ ತೀರ್ಮಾನಿಸಲಾಗುತ್ತದೆ ಎಂದು ಗೃಹ ಸಚಿವ ಡಾ .ಜಿ ಪರಮೇಶ್ವರ್ ಹೇಳಿದ್ದಾರೆ.

ಜಾತಿಗಣತಿ ಕುರಿತಂತೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ವ್ಯಾಪಕ ಚರ್ಚೆ ನಡೆಯುತ್ತಿರುವಂತೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ .ಜಿ ಪರಮೇಶ್ವರ್ ರಾಜ್ಯದ ಜನಗಣತಿ ವರದಿಯನ್ನು ಕ್ಯಾಬಿನೆಟ್ ಸಭೆ ಮುಂದೆ ತಂದು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್, 'ಇದೊಂದು ವಿಚಿತ್ರ ಸಂದರ್ಭ. ಜಾತಿ ಜನಗಣತಿ ಸ್ವೀಕಾರ ಮಾಡಿಲ್ಲ ಅಂದ್ರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ ಈಗ ಮಾಡುತ್ತೀರಿ ಅಂತ ವ್ಯಾಖ್ಯಾನ ಮಾಡ್ತಾರೆ.

ಜನಗಣತಿ ಸ್ವೀಕಾರ ವಿಳಂಬಕ್ಕೂ ಕಾರಣಗಳಿವೆ.‌ ಕ್ಯಾಬಿನೆಟ್​ನ​ಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ, ಬೇಡವಾ ಎಂದು ತೀರ್ಮಾನಿಸುತ್ತೇವೆ. ಅಸೆಂಬ್ಲಿಗೆ ಬೇಕಾಗಿಲ್ಲ ಅಂತ ಕ್ಯಾಬಿನೆಟ್ ತೀರ್ಮಾನ ಮಾಡಿದರೆ ಮುಗೀತು ಎಂದರು.

G Parameshwar
'ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ, ಆದರೆ ವರದಿ ಜಾರಿಗೆ ತನ್ನಿ': ಸರ್ಕಾರಕ್ಕೆ ಹೊಸ ತಲೆನೋವು ತಂದ BK Hariprasad!

ಅಂತೆಯೇ 'ಕೇಂದ್ರ ಜನಗಣತಿ ಕೂಡ ಆಗಲಿ. ಓವರ್ ಲ್ಯಾಪ್ ಆಗಿದ್ದರೆ ಮುಂದೆ ಸರಿಪಡಿಸಿಕೊಳ್ಳಬಹುದು. ಯಾವುದಾದರೂ ಸಮುದಾಯದ ಅಂಕಿ ಸಂಖ್ಯೆ ಹೆಚ್ಚು ಕಮ್ಮಿ ಆಗಿದ್ದರೆ ಆಮೇಲೆ ಸರಿ ಮಾಡಿಕೊಳ್ಳಬಹುದು. ಯಾವಾಗಲೂ ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ ಮತ್ತು ಉಪಯೋಗಿಸುತ್ತಾರೆ.

ಒಂದು ಸಾರಿ ಕ್ಯಾಬಿನೆಟ್​ಗೆ ಬಂದು ಚರ್ಚೆಯಾಗಲಿ, ಆಮೇಲೆ ನೋಡೋಣ. ರಾಜ್ಯ ಸರ್ಕಾರ 160 ಕೋಟಿ ರೂಪಾಯಿ ಖರ್ಚು ಮಾಡಿದೆ. ಅದಕ್ಕೂ ಲೆಕ್ಕ‌ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು ಎಂದು ಪರಮೇಶ್ವರ್​ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com