ಪ್ರಜಾಪ್ರಭುತ್ವ ಉಳಿಸಲು ರಾಜ್ಯಪಾಲರ ಹುದ್ದೆ ರದ್ದಾಗಬೇಕು: ರವಿವರ್ಮ ಕುಮಾರ್

ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯವಾಗಿದೆ ಮತ್ತು ರಾಜ್ಯಪಾಲರು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಒಲವು ತೋರುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಒಕ್ಕೂಟಕ್ಕೆ ಅಪಾಯವಾಗಿದೆ ಎಂದು ಅವರು ಪ್ರತಿಪಾದಿಸಿದರು.
ರವಿವರ್ಮ ಕುಮಾರ್
ರವಿವರ್ಮ ಕುಮಾರ್
Updated on

ಮೈಸೂರು: ರಾಜ್ಯಗಳ ರಾಜ್ಯಪಾಲರು ಪ್ರಜಾಪ್ರಭುತ್ವ ಮತ್ತು ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿರುವ ಖಾಯಂ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ರವಿವರ್ಮಕುಮಾರ್ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಭಾನುವಾರ ಒತ್ತಾಯಿಸಿದರು.

ದಸರಾ ರಾಷ್ಟ್ರೀಯ ಸಮ್ಮೇಳನದ ಉಪಸಮಿತಿ ಮತ್ತು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸಹಯೋಗದಲ್ಲಿ ಆಯೋಜಿಸಿದ್ದ “ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಕಾರ್ಯವೈಖರಿ” ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ದೇಶದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿ ಆಯ್ಕೆಯಾಗಿರುವಾಗ ಚುನಾಯಿತ ಸಂಸ್ಥೆಯಲ್ಲದ ಒಂದು ಶಕ್ತಿ ಕೇಂದ್ರವಿದೆ. ಆ ಶಕ್ತಿ ಕೇಂದ್ರ ಕೇಂದ್ರ ಸರ್ಕಾರದ ನಾಮನಿರ್ದೇಶಿತವಾಗಿದೆ. ತಮ್ಮ ಹುದ್ದೆಯಿಂದ ವಜಾಗೊಂಡ ಕೇಂದ್ರದ ಹಿರಿಯ ಮಂತ್ರಿಗಳಿಗೆ ರಾಜ್ಯಪಾಲರ ಸ್ಥಾನವನ್ನು ನೀಡಿ ರಾಜ್ಯಗಳಿಗೆ ಕಳುಹಿಸಲಾಗುತ್ತದೆ, ಇದನ್ನು 'ಪುನರ್ವಸತಿ ಕೇಂದ್ರ' ಎಂದು ಪರಿಗಣಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷ

ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯವಾಗಿದೆ ಮತ್ತು ರಾಜ್ಯಪಾಲರು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಒಲವು ತೋರುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಒಕ್ಕೂಟಕ್ಕೆ ಅಪಾಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್, ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ತಮ್ಮ ರಾಜ್ಯ ಸರ್ಕಾರಗಳೊಂದಿಗೆ ಮಸೂದೆಗಳು ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ನಿರಂತರವಾಗಿ ಸಂಘರ್ಷ ನಡೆಸಿದ್ದಾರೆ. ರಾಜ್ಯಪಾಲರು ರಾಜ್ಯ ಸರ್ಕಾರಗಳಿಗೆ ತಮ್ಮ ಆಡಳಿತ ನಡೆಸಲು ಸಾಧ್ಯವಾಗದಂತೆ ಮಾಡಿದ್ದಾರೆ. ಈ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗಿದೆ. ಗವರ್ನರ್‌ಗಳು ಕೇವಲ ಪ್ರಜಾಪ್ರಭುತ್ವಕ್ಕೆ ಅಪಾಯವಲ್ಲ, ಒಕ್ಕೂಟ ವ್ಯವಸ್ಥೆಗೂ ಅಪಾಯ. ದೇಶದಲ್ಲಿ ಒಕ್ಕೂಟ ವ್ಯವಸ್ಥೆ ಉಳಿಯಬೇಕಾದರೆ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಬೇಕು. ನಾವು ಹೋರಾಟಗಳನ್ನು ನಡೆಸಿ ಯಶಸ್ವಿಯಾದರೆ ಒಕ್ಕೂಟ ವ್ಯವಸ್ಥೆ ಆರೋಗ್ಯಕರ ಮತ್ತು ಜೀವಂತವಾಗಿರುತ್ತದೆ ಎಂದರು.

ರವಿವರ್ಮ ಕುಮಾರ್
ರಾಜ್ಯಪಾಲರು ಪ್ರತಿದಿನ ಪತ್ರ ಬರೆದರೆ ಸರ್ಕಾರ ಉತ್ತರಿಸಲು ಸಾಧ್ಯವಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸರಕು ಮತ್ತು ಸೇವಾ ತೆರಿಗೆ (GST) ಒಕ್ಕೂಟ ವ್ಯವಸ್ಥೆಗೆ ಅಪಾಯ ತಂದೊಡ್ಡಿದೆ. ಸಂವಿಧಾನದ ಪ್ರಕಾರ ಸರ್ವೋಚ್ಚವಾಗಿರುವ ರಾಜ್ಯಗಳು ತಮ್ಮ ಹಣಕಾಸಿನ ಬಾಕಿ ಬಿಡುಗಡೆಗೆ ಭಿಕ್ಷಾಪಾತ್ರೆಯೊಂದಿಗೆ ಕೇಂದ್ರದ ಮುಂದೆ ತಲೆಬಾಗುವಂತೆ ಮಾಡಲಾಗಿದೆ. ಕರ್ನಾಟಕ ಸರ್ಕಾರ ತನ್ನ ಪಾಲು ಪಡೆಯಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ ಎಂದು ರವಿವರ್ಮ ಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com