ಪೋಕ್ಸೋ ಪ್ರಕರಣ: ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಆದೇಶ

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಿದೆ.
ಮುರುಘಾ ಶ್ರೀಗಳು
ಮುರುಘಾ ಶ್ರೀಗಳು
Updated on

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷಗಳ ವಿಚಾರಣೆ ಮುಗಿಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆ ಆಗಲಿದ್ದಾರೆ. ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಜೈಲಿನಿಂದ ಮುರುಘಾಶ್ರೀ ಹೊರಗೆ ಬರಲಿದ್ದಾರೆ.

ಮುರುಘಾ ಶ್ರೀಗಳು
ಸರ್ಕಾರದ ಕಪಿಮುಷ್ಠಿಯಲ್ಲಿರುವ ಹಿಂದೂ ದೇವಾಲಯಗಳನ್ನು ಹಿಂದೂ ಟ್ರಸ್ಟ್ ಗಳೇ ನಿರ್ವಹಿಸಲಿ: ಪೇಜಾವರ ಶ್ರೀ

ಚಿತ್ರದುರ್ಗ ಜೈಲಿಗೆ ಕೋರ್ಟ್​ನಿಂದ ಬಿಡುಗಡೆ ಆದೇಶ ಬಂದಿದೆ. ಅದರಂತೆ ಇಂದೇ ಶ್ರೀಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಇನ್ನು ಹೈಕೋರ್ಟ್ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮುರುಘಾಶ್ರೀ ಇರುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದ್ದರಿಂದ ಅವರು ದಾವಣಗೆರೆಗೆ ತೆರಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com