ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನ: ನಿಯೋಗದಿಂದ ಸಿಎಂ ಭೇಟಿ, ಮನವಿ

ಇನ್ನಾದರೂ ಸರ್ಕಾರ ಎಸ್ಟಿ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅನುದಾನ ಬಿಡುಗಡೆ ಮಾಡಿ, ಫಲಾನುಭವಿಗಳಿಗೆ ಯೋಜನೆ ಅನುಷ್ಠಾನಗೊಳಿಸುವಂತೆ ಸಮಾಜದ ಮುಖಂಡರು ಸಿಎಂಗೆ ಮನವಿ ಮಾಡಿದರು.
ಎಸ್‌ಟಿ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವ ಸಿಎಂ.
ಎಸ್‌ಟಿ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವ ಸಿಎಂ.
Updated on

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಎಸ್‌ಟಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಶಾಸಕರಾದ ಬಿ.ಎಂ.ನಾಗರಾಜ, ಟಿ.ರಘುಮೂರ್ತಿ, ಬಸನಗೌಡ ತುರವಿಹಾಳ, ರಾಜಾ ವೇಣುಗೋಪಾಲ ನಾಯಕ, ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಭೇಟಿ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187.33 ಕೋಟಿ ರೂ.ಗಳ ಹಗರಣ ಕುರಿತು ಚರ್ಚೆ ನಡೆಸಿದರು.

ಎಸ್‌ಟಿ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವ ಸಿಎಂ.
ವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ BJP ಮುಂದು

ಇನ್ನಾದರೂ ಸರ್ಕಾರ ಎಸ್ಟಿ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅನುದಾನ ಬಿಡುಗಡೆ ಮಾಡಿ, ಫಲಾನುಭವಿಗಳಿಗೆ ಯೋಜನೆ ಅನುಷ್ಠಾನಗೊಳಿಸುವಂತೆ ಸಮಾಜದ ಮುಖಂಡರು ಸಿಎಂಗೆ ಮನವಿ ಮಾಡಿದರು.

ಪಟ್ಟಭದ್ರ ಹಿತಾಸಕ್ತಿಗಳು ‘ತಳವರ’ ಸಮುದಾಯದವರೆಂದು ಸುಳ್ಳು ಹೇಳಿ ನಕಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿರುವುದನ್ನು ತಡೆಯಲು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಈ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೂಡಲೇ ಸಭೆ ಕರೆದು ಎಸ್‌ಟಿ ಸಮುದಾಯದ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆ ನೀಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com