ಬೆಂಗಳೂರಿನಲ್ಲಿ ಮಳೆ: ಅಕ್ಟೋಬರ್ 20ರವರೆಗೆ ಆರೆಂಜ್ ಅಲರ್ಟ್

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ದಸರಾ ಹಬ್ಬದ ಸಂಭ್ರಮ ಮುಗಿದು ಇಂದು ವಾರದ ಆರಂಭ ಕಚೇರಿ ಕೆಲಸಕ್ಕೆ ಹೊರಟವರಿಗೆ ವರುಣನ ದರ್ಶನವಾಗಿದೆ. ಬೆಳ್ಳಂಬೆಳಗ್ಗೆಯೇ ಮಳೆ ಸುರಿದಿದ್ದು, ಮಧ್ಯಾಹ್ನವಾದರೂ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಆರೆಂಜ್ ಅಲರ್ಟ್: ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ. ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com