ಬೆಂಗಳೂರು: ಪ್ರಾಂಶುಪಾಲರ ಕಿರುಕುಳಕ್ಕೆ ಬೇಸತ್ತು ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ

ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಅಂತೆಯೇ ತಮ್ಮ ಚೇಂಬರ್'ಗೆ ಕರೆಸಿ ಶಬಾನಾಗೆ ಪ್ರಾಂಶುಪಾಲೆ ಬೈದಿದ್ದರು ಎನ್ನಲಾಗಿದೆ.
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
Updated on

ಬೆಂಗಳೂರು: ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಶಬಾನಾ (44) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಅಂತೆಯೇ ತಮ್ಮ ಚೇಂಬರ್'ಗೆ ಕರೆಸಿ ಶಬಾನಾಗೆ ಪ್ರಾಂಶುಪಾಲೆ ಬೈದಿದ್ದರು ಎನ್ನಲಾಗಿದೆ. ಈ ಘಟನೆ ಬಳಿಕ ಮನನೊಂದು ಶಬಾನಾ ಅವರು ನಿದ್ರೆ ಮಾತ್ರೆಗಳ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆ (ಸಾಂಕೇತಿಕ ಚಿತ್ರ)
ಬೆಂಗಳೂರು: ಮದುವೆಗೆ ಒಪ್ಪದ ಕಿರುತೆರೆ ನಟಿ; ಮನನೊಂದ ಯುವಕ ಆತ್ಮಹತ್ಯೆ

ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಶಬಾನಾ ಅವರನ್ನು ಕಂಡ ಕಾಲಜು ವಿದ್ಯಾರ್ಥಿಗಳು ಸಿಬ್ಬಂದಿಗೆ ಮಾಹಿತಿ ನೀಡಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತಿಲಕನಗರ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com