ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಕೊನೆಗೂ ಜಾಮೀನು

ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.
Munirathna
ಮುನಿರತ್ನ
Updated on

ಬೆಂಗಳೂರು: ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ.

ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.

ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

ಪೊಲೀಸರ ತನಿಖೆಗೆ ಸಹಕಾರ ನೀಡುವುದು, ಸಾಕ್ಷಿಗಳನ್ನು ನಾಶಪಡಿಸದಿರುವುದು, ಸಾಕ್ಷ್ಯಾಧಾರರ ಮೇಲೆ ಪ್ರಭಾವ ಬೀರದಿರುವುದು ಮತ್ತು ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ.

ಅಂದಹಾಗೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಎಸ್‌‍ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಬಂಧಿಸಿದ್ದರು. ಮುನಿರತ್ನ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದರು.

Munirathna
ಅತ್ಯಾಚಾರ ಆರೋಪ: A1 ಮುನಿರತ್ನ ಬಿಟ್ಟು ಉಳಿದವರ ಪೈಕಿ ಮೂವರಿಗೆ ಜಾಮೀನು ಮಂಜೂರು

ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌‍ಐಟಿಗೆ ವಹಿಸಿತ್ತು. ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಆದರೆ ಮಹಿಳೆ ನೀಡಿದ ದೂರಿನನ್ವಯ ಎಸ್‌‍ಐಟಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com