ನೇರ ನಗದು ಹಣದ ಬದಲಿಗೆ ಆಹಾರ ಕಿಟ್ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ
ಬೆಂಗಳೂರು: ಡಿಬಿಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ DBT ನೀಡುತ್ತಿರುವುದನ್ನು ಮುಂದುವರೆಸಲಾಗುತ್ತದೆ. ಪಡಿತರ ಚೀಟಿ ಪರಿಷ್ಕರಣೆ ಬಳಿಕ ಮುಂದೆ ಹಣದ ಬದಲು ಅಕ್ಕಿ ಕೊಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಪಡಿತರ ಚೀಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಮುನಿಯಪ್ಪ, ಕಳೆದ ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದರೂ ಚರ್ಚೆ ನಡೆದಿಲ್ಲ. “ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಡಿಬಿಟಿ ಬದಲಿಗೆ ಅಡುಗೆ ಎಣ್ಣೆ, ಬೇಳೆ ಮತ್ತು ಸಕ್ಕರೆ ಹೊಂದಿರುವ ಆಹಾರ ಕಿಟ್ಗಳನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಅಕ್ಟೋಬರ್ 28ರ ಸಚಿವ ಸಂಪುಟ ಸಭೆಯಲ್ಲಿ ಆಹಾರ ಕಿಟ್ ವಿತರಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಪಡಿತರ ಚೀಟಿಗಳ ಪರಿಷ್ಕರಣೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು, ಇದು ಒಂದು ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ್ದ ಕೇಂದ್ರ ಇತ್ತೀಚೆಗೆ ಕೆಜಿಗೆ 28 ರೂ.ಗೆ ಅಕ್ಕಿ ನೀಡಲು ಮುಂದಾಗಿದೆ ಎಂದರು. ರಾಜ್ಯಕ್ಕೆ ಪ್ರತಿ ತಿಂಗಳು 20,000 ಟನ್ ಅಕ್ಕಿ ಅಗತ್ಯವಿರುವುದರಿಂದ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿರುವ ಇಲಾಖೆ ಕಚೇರಿಗಳಿಗೆ 50 ಲಕ್ಷ ರೂ.ಗಳಲ್ಲಿ ‘ಆಹಾರ ಸೌಧ’ ನಿರ್ಮಿಸಲಾಗುವುದು. ಹೋಟೆಲ್ಗಳು ಮತ್ತು ಫಂಕ್ಷನ್ ಹಾಲ್ಗಳಲ್ಲಿ ವ್ಯರ್ಥವಾಗುತ್ತಿರುವ ಸುಮಾರು ಮೂರನೇ ಒಂದು ಭಾಗದಷ್ಟು ಆಹಾರವನ್ನು ಪರಿಶೀಲಿಸಬೇಕು ಎಂಬ ಸಂದೇಶವನ್ನು ಹರಡಲು ಅಕ್ಟೋಬರ್ ಅಂತ್ಯದಲ್ಲಿ ವಿಶ್ವ ಆಹಾರ ಮೇಳವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು. ಪರಿಷ್ಕರಣೆ ಸಂದರ್ಭದಲ್ಲಿ ಇಲಾಖೆಯು 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಿದ್ದು, ಅದರಲ್ಲಿ 3,63,664 ರದ್ದಾಗಿದೆ, ಆದರೆ 3,97,111 ಕಾರ್ಡ್ಗಳಿಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುನಿಯಪ್ಪ ಹೇಳಿದರು. ಸರ್ಕಾರಿ ನೌಕರರು 2,964 ಕಾರ್ಡ್ಗಳನ್ನು ತೆಗೆದುಕೊಂಡಿದ್ದು, ಅವರಿಗೆ ದಂಡ ವಿಧಿಸಲಾಗಿದೆ ಎಂದು ವಿವರ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ