ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ರದ್ದು?

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿ ಚನ್ನಮ್ಮ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ, ಹೆಚ್ ಡಿ ಕುಮಾರಸ್ವಾಮಿ ತಾಯಿಯ ಆರೋಗ್ಯ ವಿಚಾರಿಸಲು ತೆರಳಿದ ಹಿನ್ನೆಲೆಯಲ್ಲಿ ಸಭೆ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
BJP-JDS (file pic)
ಬಿಜೆಪಿ, ಜೆಡಿಎಸ್ ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಹೊಟೆಲ್ ನಲ್ಲಿ ಸಮನ್ವಯ ಸಭೆ ನಿಗದಿಯಾಗಿತ್ತು.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿ ಚನ್ನಮ್ಮ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ, ಹೆಚ್ ಡಿ ಕುಮಾರಸ್ವಾಮಿ ತಾಯಿಯ ಆರೋಗ್ಯ ವಿಚಾರಿಸಲು ತೆರಳಿದ ಹಿನ್ನೆಲೆಯಲ್ಲಿ ಸಭೆ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

BJP-JDS (file pic)
ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ: ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದ ಸಿಪಿ ಯೋಗೇಶ್ವರ್, ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣಕ್ಕೆ ಎನ್ ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ವಿಷಯ ಕಗ್ಗಂಟಾಗಿದೆ.

ಅಭ್ಯರ್ಥಿಯ ಆಯ್ಕೆ ಅಂತಿಮಗೊಳಿಸಲು ಚರ್ಚೆ ನಡೆಸುವುದಕ್ಕಾಗಿ ಬಿಜೆಪಿ-ಜೆಡಿಎಸ್ ಮುಖಂಡರ ಸಮನ್ವಯ ಸಭೆ ಇಂದು ನಿಗದಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com