ಶಿವಮೊಗ್ಗ: ತಪಾಸಣೆಗೆ ತಡೆದ ಸಂಚಾರಿ ಪೊಲೀಸ್ ಅಧಿಕಾರಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು!

ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಅಲ್ಲಿಗೆ ಕಾರೊಂದು, ಈ ವೇಳೆ ಕಾರು ನಿಲ್ಲಿಸುವಂತೆ ಚಾಲಕನಿಗೆ ಟ್ರಾಫಿಕ್‌ ಪೊಲೀಸ್ ಅಧಿಕಾರಿ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ.
Driver tries to run over traffic cop
ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು
Updated on

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ರೀತಿ ಕಾರು ಚಲಾಯಿಸಿರುವುದು ಭದ್ರಾವತಿ ನಿವಾಸಿ ಮಿಥುನ್ ಜಗದಾಳೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಅಲ್ಲಿಗೆ ಕಾರೊಂದು , ಈ ವೇಳೆ ಕಾರು ನಿಲ್ಲಿಸುವಂತೆ ಚಾಲಕನಿಗೆ ಟ್ರಾಫಿಕ್‌ ಪೊಲೀಸ್ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ.

ಕೂಡಲೇ ಕಾರಿನ ಮುಂಭಾಗ ಹಿಡಿದ ಪೊಲೀಸ್ ಸಿಬ್ಬಂದಿ ಬಾನೆಟ್ ಮೇಲೆ ಹತ್ತಿದ್ದಾರೆ. ನಂತರ ಕಾರು ಚಾಲಕ ಸಹ್ಯಾದ್ರಿ ಕಾಲೇಜಿನ‌‌ ಎರಡನೇ ಗೇಟಿನಿಂದ ಮತ್ತೂರು ಕ್ರಾಸ್ ತನಕ ಸುಮಾರು 100 ಮೀಟರ್ ಸಾಗಿದ್ದಾನೆ. ನಂತರ ನಿಲ್ಲಿಸಿದ್ದಾನೆ. ತಕ್ಷಣ ಟ್ರಾಫಿಕ್ ಸಿಬ್ಬಂದಿ ಚಾಲಕನಿಗೆ ದಂಡ ಹಾಕಿ‌ ಕಳುಹಿಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾರು ಚಾಲಕನ ವಿರುದ್ಧ ಪೂರ್ವ ಸಂಚಾರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Driver tries to run over traffic cop
ಯುವಜನತೆ ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಲು ತರಬೇತಿ ನೀಡಿ: ಪೊಲೀಸ್ ಆಯುಕ್ತ ಬಿ ದಯಾನಂದ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com