ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!

ಮಗನಿಂದಲೇ ಹತ್ಯೆಯಾದ ತಂದೆಯನ್ನು ರಂಗಸ್ವಾಮಿ(50) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರ ದೇವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿತ್ರದುರ್ಗ: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ‌ ತನ್ನ ತಂದೆಯನ್ನೇ ಕೊಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮಗನಿಂದಲೇ ಹತ್ಯೆಯಾದ ತಂದೆಯನ್ನು ರಂಗಸ್ವಾಮಿ(50) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರ ದೇವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮನೆಯಲ್ಲಿ ರಾತ್ರಿ ಊಟದ ವೇಳೆ ತನಗೆ ಮೊಟ್ಟೆ ಕೊಡಲಿಲ್ಲ ಎಂದು ದೇವರಾಜ್‌ ತಂದೆ ಜತೆ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ತೀವ್ರ ಆಕ್ರೋಶಗೊಂಡ ದೇವರಾಜ್, ಎಲ್ಲಾ ವಿಚಾರದಲ್ಲೂ ನನ್ನನ್ನು ಕಡೆಗಣಿಸುತ್ತಿದ್ದೀಯಾ, ಮದುವೆಯನ್ನೂ ಮಾಡಿಸುತ್ತಿಲ್ಲ ಎಂದು ತಂದೆ ಮೇಲೆ ಹಲ್ಲೆ ನಡೆಸಿದ್ದಾನೆ.

ಸಾಂದರ್ಭಿಕ ಚಿತ್ರ
30 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ!

ಆರೋಪಿ, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿ ಎದೆ ಮತ್ತು ಕುತ್ತಿಗೆಯ ಮೇಲೆ ಕಾಲಿಟ್ಟು, ಬಲವಾಗಿ ತುಳಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬ್ಬಿನಹೊಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com