ವಂಚನೆ ಪ್ರಕರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್, ತನಿಖೆಗೆ ಹೈಕೋರ್ಟ್ ಬ್ರೇಕ್!

ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿದ ದೂರಿನ ಮೇರೆಗೆ ಇತ್ತೀಚೆಗೆ ಬಂಧಿತರಾಗಿದ್ದ ಮೂವರು ಆರೋಪಿಗಳ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿದ್ದಾರೆ.
ಗೋಪಾಲ್ ಜೋಶಿ
ಗೋಪಾಲ್ ಜೋಶಿPTI
Updated on

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಅವರ ಪುತ್ರ ಅಜಯ್ ಜೋಶಿ ಮತ್ತು ಬೆಂಗಳೂರಿನ ವಿಜಯಲಕ್ಷ್ಮಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೆ ಅವರನ್ನು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿದ ದೂರಿನ ಮೇರೆಗೆ ಇತ್ತೀಚೆಗೆ ಬಂಧಿತರಾಗಿದ್ದ ಮೂವರು ಆರೋಪಿಗಳ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿದ್ದಾರೆ.

ದೂರಿನಲ್ಲಿ ಆರೋಪಿಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಟಿಕೆಟ್ ಕೊಡಿಸದೆ ಆರೋಪಿಗಳು ವಂಚನೆ ಮತ್ತು ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಗೋಪಾಲ್ ಜೋಶಿ
ನನಗೆ ಸಹೋದರಿ ಇಲ್ಲ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಪ್ರಹ್ಲಾದ್‌ ಜೋಶಿ

ಈ ಮೊತ್ತವನ್ನು ಮರುಪಾವತಿಸಲು ಬದ್ಧರಾಗಿದ್ದೇವೆ ಎಂದು ಆರೋಪಿತ ಅರ್ಜಿದಾರರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಪ್ರಕರಣಕ್ಕೆ ತಡೆಯಾಜ್ಞೆ ನೀಡಲಾಗಿದೆ. ಪ್ರಲ್ಹಾದ್ ಜೋಶಿ ಪ್ರಕರಣದಿಂದ ದೂರ ಉಳಿದಿದ್ದು, ಸಹೋದರನಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com