Siddaramaiah- TJ Abraham
ಸಿದ್ದರಾಮಯ್ಯ- ಟಿಜೆ ಅಬ್ರಹಾಂonline desk

ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಮಾನನಷ್ಟ ಮೊಕದ್ದಮೆ

ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಸಿದ್ದರಾಮಯ್ಯ ಕೆಲವು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್‌ಮೇಲರ್ ಮತ್ತು ಕೆಟ್ಟ ಪೂರ್ವಾಪರ ಹೊಂದಿರುವ ವ್ಯಕ್ತಿ ಎಂದು ಕರೆದಿದ್ದಾರೆ.
Published on

ಬೆಂಗಳೂರು: ತಮ್ಮನ್ನು ಬೆದರಿಕೆ ಹಾಕುವವನು (ಬ್ಲ್ಯಾಕ್ ಮೇಲರ್) ಎಂದು ಕರೆದಿದ್ದಕ್ಕೆ ಅಡ್ವೊಕೇಟ್- ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದ ಅರ್ಜಿದಾರರ ಪೈಕಿ ಟಿಜೆ ಅಬ್ರಾಹಂ ಸಹ ಒಬ್ಬರಾಗಿದ್ದಾರೆ.

ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಸಿದ್ದರಾಮಯ್ಯ ಕೆಲವು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್‌ಮೇಲರ್ ಮತ್ತು ಕೆಟ್ಟ ಪೂರ್ವಾಪರ ಹೊಂದಿರುವ ವ್ಯಕ್ತಿ ಎಂದು ಕರೆದಿದ್ದಾರೆ ಎಂದು ಪಿಟಿಐಗೆ ಹೇಳಿಕೆ ನೀಡಿರುವ ಅಬ್ರಹಾಂ ಆರೋಪಿಸಿದ್ದಾರೆ.

ನೀವು (ಸಿದ್ದರಾಮಯ್ಯ) ನಕಲಿ ಮತ್ತು ಅಕ್ರಮ ಹಕ್ಕು ಸೃಷ್ಟಿಸಿ 14 ಸೈಟ್‌ಗಳನ್ನು ತೆಗೆದುಕೊಂಡಿದ್ದೀರಿ ಮತ್ತು ನೀವು ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆಯುತ್ತೀರಿ! ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ನೀವು ಹೇಗೆ ತಪ್ಪಿಸಿಕೊಳ್ಳುತ್ತೀರಿ ಎಂದು ನಾವು ನೋಡುತ್ತೇವೆ ಎಂದು ಅಬ್ರಾಹಂ ಹೇಳಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಮೈಸೂರಿನ ಮೇಲ್ಮಟ್ಟದ ಪ್ರದೇಶದಲ್ಲಿ ಮುಡಾ ಸ್ವಾಧೀನಪಡಿಸಿಕೊಂಡಿರುವ ಭೂಮಿಗಿಂತ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ಪರಿಹಾರದ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Siddaramaiah- TJ Abraham
ಸಚಿವ ಜಮೀರ್ ಅಹ್ಮದ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಿ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಮನವಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com