‘ಸುವರ್ಣ ಮಹೋತ್ಸವ’ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ: ಸಚಿವ ಶಿವರಾಜ ತಂಗಡಗಿ

ಕರ್ನಾಟಕ ಸಂಭ್ರಮ - 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ.
ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ ತಂಗಡಗಿ
Updated on

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಗುರುವಾರ ಘೋಷಿಸಿದ್ದಾರೆ.

ಕರ್ನಾಟಕ ಸಂಭ್ರಮ - 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು, ಇಂದು ಪ್ರಶಸ್ತಿ ಮೊತ್ತವನ್ನು 50,000 ರೂ.ದಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ಇದೊಂದು ಐತಿಹಾಸಿಕ ಸಂದರ್ಭ ಆಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ 1 ಲಕ್ಷ ರೂ.ಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಸಚಿವ ಶಿವರಾಜ ತಂಗಡಗಿ
ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ: ಮನೆ-ಮನೆಯಲ್ಲಿ ಕನ್ನಡ ಬಾವುಟ ಹಾರಿಸುವಂತೆ ಸಿಎಂ ಮನವಿ

ಇದಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಂಗಡಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com