ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತನಿಖೆ ಅಂತಿಮ ಘಟ್ಟಕ್ಕೆ; ಇದೇ ವಾರ ದರ್ಶನ್‌ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್'ಶೀಟ್ ಸಲ್ಲಿಕೆ!

ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪಿಗಳು
ರೇಣುಕಾಸ್ವಾಮಿ ಕೊಲೆ ಆರೋಪಿಗಳು
Updated on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದ್ದು, ನಟ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದೆ. ಇದೇ ವಾರ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ದರ್ಶನ್ ಮತ್ತು ಅವರ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್‌ನಲ್ಲಿ ವಜಾ ಆಗಿದೆ.

ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತನಿಖಾ ತಂಡ ಕೆಲ ವಿಧಿವಿಜ್ಞಾನ ಮತ್ತು ತಾಂತ್ರಿಕ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪಿಗಳು
15 ಕೆ.ಜಿ ತೂಕ ಕಳೆದುಕೊಂಡ 'ದಾಸ'ನಿಗೆ ಕಾಡುತ್ತಿದೆ ಬೆನ್ನುನೋವು: ದರ್ಶನ್ ಗೆ ಜೈಲಿನ ವೈದ್ಯರಿಂದ ಚಿಕಿತ್ಸೆ

ಘಟನೆಯ ಸಮಯದಲ್ಲಿ ಆರು ಆರೋಪಿಗಳು ಧರಿಸಿದ್ದ ಬಟ್ಟೆ, ಪಾದರಕ್ಷೆಗಳು ಮತ್ತು ಚರ್ಮದ ವಸ್ತುಗಳನ್ನು ಅವರ ಬಂಧನದ ನಂತರ ಅವರ ಮನೆಗಳಿಂದ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು 200 ಕ್ಕೂ ಹೆಚ್ಚು ಪ್ರಮುಖ ಸಾಕ್ಷ್ಯಗಳ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ, ಇದು ಪ್ರಕರಣವನ್ನು ಮತ್ತಷ್ಟು ಬಲಪಡಿಸುತ್ತದೆ. ತೀವ್ರತರ ಗಾಯಗಳ ಪರಿಣಾಮವಾಗಿ ಆಘಾತ ಮತ್ತು ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆಂದು ಮರಣೋತ್ತರ ಪರೀಕ್ಷಾ ವರದಿ ದೃಢಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು. ಕೊಲೆಯಂತಹ ಘೋರ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿದ ನಂತರ ಪೊಲೀಸರು 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com