ಸಂಸ್ಕೃತ ಭಾಷೆ ಕಲಿಯದಿದ್ದರೆ ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ: ಸುಗುಣೇಂದ್ರ ತೀರ್ಥ ಸ್ವಾಮೀಜಿ

ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ ಎಂದು ಹೇಳಿದ್ದಾರೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ.
ಸುಗುಣೇಂದ್ರ ತೀರ್ಥ ಸ್ವಾಮೀಜಿ
ಸುಗುಣೇಂದ್ರ ತೀರ್ಥ ಸ್ವಾಮೀಜಿ
Updated on

ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿ, ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ ಎಂದು ಹೇಳಿದ್ದಾರೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲಭಾಷೆಯ ಮೂಲವೂ ಆಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇರಳ ರಾಜ್ಯಪಾಲ ಆರಿಫ್ ಖಾನ್ ಮಾತನಾಡಿ, ದೇವರಿಗೆ ಯಾವ ಭಾಷೆಯಲ್ಲಿ ಪ್ರಾರ್ಥಿಸುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಲ್ಲಿ ಪ್ರಾರ್ಥಿಸುತ್ತೇವೆ ಎನ್ನುವದು ಮುಖ್ಯ ಎಂದು ಹೇಳಿದ್ದಾರೆ.

ಸುಗುಣೇಂದ್ರ ತೀರ್ಥ ಸ್ವಾಮೀಜಿ
ಉಡುಪಿ: ಸರ್ವಜ್ಞ ಪೀಠಾರೋಹಣ ಮಾಡಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com