ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಧರೆಗುರುಳಿದ ಬೃಹತ್ ಗಾತ್ರದ ಮರ: 3 ಕಾರುಗಳು ಜಖಂ, ಇಬ್ಬರಿಗೆ ಗಾಯ

ಭಾನುವಾರ ಸಂಜೆ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಒಣಗಿದ್ದ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಬಿದ್ದ ಪರಿಣಾಮ 3 ಕಾರುಗಳು ಜಖಂಗೊಂಡು, ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾನುವಾರ ನಡೆದಿದೆ.

ನಿನ್ನೆ (ಸೆ.1) ಸಂಜೆ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
ಬೆಂಗಳೂರು ಮಳೆ: ಧರೆಗುರುಳಿದ ಮರ, ಆಟೋ ರಿಕ್ಷಾ ಚಾಲಕನ ಬಲಿ!

ಗಾಯಾಳುಗಳನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು, ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com