ಆಜಾನ್ ಶಬ್ದ ಕೇಳಿ ಭಾಷಣ ನಿಲ್ಲಿಸಿದ ಸಿದ್ದರಾಮಯ್ಯ; ಮೌನವಾಗಿ ನಿಂತ ಸಿಎಂ!

ಸಿಎಂ ಸಿದ್ದರಾಮಯ್ಯ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಆಜಾನ್ ಸದ್ದು ಕೇಳಿಸಿದೆ.
CM siddaramaiah stops speech amid Azaan
ಆಜಾನ್ ಸದ್ದು ಕೇಳಿ ಮೌನವಾಗಿ ನಿಂತ ಸಿಎಂ ಸಿದ್ದರಾಮಯ್ಯ online desk
Updated on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಜಾನ್ ಕೇಳಿ ತಮ್ಮ ಭಾಷಣವನ್ನು ಅರ್ಧಕ್ಕೇ ನಿಲ್ಲಿಸಿದ ಘಟನೆ ಶಿವಾಜಿನಗರದಲ್ಲಿ ನಡೆದಿದೆ.

ಸಿಎಂ ಸಿದ್ದರಾಮಯ್ಯ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಕೂಗು ಕೇಳಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತ ಪ್ರಸಂಗದ ವಿಡಿಯೋ ವೈರಲ್ ಆಗತೊಡಗಿದೆ.

CM siddaramaiah stops speech amid Azaan
ಕಾಂಗ್ರೆಸ್ ನಲ್ಲಿ ಕುರ್ಚಿ ಕಚ್ಚಾಟ: ಸಿದ್ದರಾಮಯ್ಯ ಉತ್ತರಾಧಿಕಾರಿಯಾಗಿ ಪರಮೇಶ್ವರ್? ಬ್ರಾಹ್ಮಣ ಸಮುದಾಯದ ದೇಶಪಾಂಡೆಗಿಲ್ಲ ಬೆಂಬಲ!

ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

​ಆಜಾನ್​ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದರು. ​ಆಜಾನ್ ಮುಗಿಯುತ್ತಿದ್ದಂತೆಯೇ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಮುಂದುವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com