ವಕ್ಫ್ ಆಸ್ತಿಗಳ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್
Updated on

ಧಾರವಾಡ: ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹುಬ್ಬಳ್ಳಿ-ಧಾರವಾಡದಲ್ಲಿ ವಕ್ಫ್ ಆಸ್ತಿಗಳಿಗೆ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ್ದಾರೆ.

ಸೋಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಸಚಿವರು, ಅಧಿಕಾರಿಗಳು ಒತ್ತುವರಿ ತಡೆಗೆ ಕ್ರಮಕೈಗೊಂಡು ಈ ಆಸ್ತಿಗಳ ರಕ್ಷಣೆಗೆ ಮುಂದಾಗಬೇಕು ಎಂದರು.

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು.

ಜಮೀರ್ ಅಹ್ಮದ್ ಖಾನ್
ವಕ್ಫ್ ಆಸ್ತಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದಿಲ್ಲ: ಜೆಪಿಸಿ ಮುಖ್ಯಸ್ಥ ಜಗದಾಂಬಿಕಾ ಪಾಲ್

ಈ ಆಸ್ತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನಗರಸಭೆ, ಕಂದಾಯ, ಜಿಲ್ಲಾ ಪಂಚಾಯಿತಿ, ನಗರಾಭಿವೃದ್ಧಿ ಮುಂತಾದ ಸಂಬಂಧಿತ ಇಲಾಖೆಗಳೊಂದಿಗೆ ನಿರಂತರ ಸಂವಹನ ನಡೆಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಎರಡೂ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್‌ಗೆ ಸಲ್ಲಿಕೆಯಾಗಿರುವ ಮನವಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಎಂಎಲ್ಸಿ ಅಬ್ದುಲ್ ಜಬ್ಬಾರ್, ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್ ಬಾಷಾ, ಶಾಸಕರಾದ ಕೋನರೆಡ್ಡಿ, ಅರವಿಂದ್ ಬೆಲ್ಲದ್, ಜಿಲ್ಲಾಧಿಕಾರಿಗಳಾದ ದಿವ್ಯಪ್ರಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕಿ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com