ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಬ್ರೇಕ್ ಫೇಲ್: 7 ಮಂದಿಗೆ ಗಾಯ

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಲಾಗಿರುವ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆಯ ವಾಹನದದಲ್ಲಿ ಪತ್ರಕರ್ತರು ತೆರಳುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಶುಕ್ರವಾರ ನಡೆದಿದೆ.

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಂಡಿದ್ದು, ಸಿಎಂ, ಡಿಸಿಎಂ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com