ವಿಜಯಪುರ: ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ವೈದ್ಯ

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ.
ಡಾ. ನಾರಾಯಣ ರಾಥೋಡ್
ಡಾ. ನಾರಾಯಣ ರಾಥೋಡ್TNIE
Updated on

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ್ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆ ನಡೆದಿದೆ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಯಲ್ಲಿರುವ ಡಾ. ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಕರ್ತವ್ಯದ ವೇಳೆ ಮದ್ಯ ಸೇವಿಸಿ ನಾರಾಯಣ ಅಮಾನತುಗೊಂಡಿದ್ದರು. ಆತನ ಮೇಲೆ ಮಹಿಳಾ ರೋಗಿಗಳಿಗೆ ಮೌಖಿಕವಾಗಿ ನಿಂದಿಸಿದ ಮಾಡಿದ ಆರೋಪಗಳಿವೆ. ಇತ್ತೀಚಿನ ಘಟನೆಯ ನಂತರ, ಡಾ. ರಾಥೋಡ್ ರನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರಿಂದ ಮತ್ತು ಆಸ್ಪತ್ರೆಯ ಸಿಬ್ಬಂದಿಯಿಂದ ಒತ್ತಾಯ ಹೆಚ್ಚುತ್ತಿದೆ.

ಡಾ. ನಾರಾಯಣ ರಾಥೋಡ್
ಚಿಕ್ಕಮಗಳೂರು: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿಟಿ ರವಿ ಒತ್ತಾಯ

ಇದೇ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಡಾ.ರಾಥೋಡ್ ಅವರ ನಡೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ವಿಷಯವು ನನ್ನ ಗಮನಕ್ಕೆ ಬಂದಿರುವುದರಿಂದ, ತಪ್ಪಿತಸ್ಥ ವೈದ್ಯರ ವಿರುದ್ಧ ಗಂಭೀರ ಶಿಸ್ತು ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com