2017ರ ನಿವೇಶನ ಹಂಚಿಕೆ ಹಗರಣ: 18 ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಲೋಕಾಯುಕ್ತ ಕಚೇರಿ
ಲೋಕಾಯುಕ್ತ ಕಚೇರಿ
Updated on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿರುವ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಪ್ರಭಾವಿ ವ್ಯಕ್ತಿಗಳಿಗೆ 2017 ರಲ್ಲಿ 350 ನಿವೇಶನ ಹಂಚಿಕೆ ಆರೋಪದ ಮೇಲೆ ಲೋಕಾಯುಕ್ತ 18 ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಜಯನಗರ ಎರಡನೇ ಹಂತದ ಸರ್ವೆ ನಂಬರ್ 89ಕ್ಕೆ ಅತಿಕ್ರಮ ಪ್ರವೇಶ ಮಾಡಿ 7.18 ಎಕರೆ ಒತ್ತುವರಿ ಮಾಡಿ 25 x 25 ಅಡಿ ಅಳತೆಯ ನಿವೇಶನಗಳನ್ನು ಯಾವುದೇ ಅನುಮತಿಯಿಲ್ಲದೆ ಅಭಿವೃದ್ಧಿಪಡಿಸಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿ ಹಿನಕಲ್ ಪಂಚಾಯಿತಿ ಅಧ್ಯಕ್ಷ ಕೃಷ್ಣಮಾದೇಗೌಡ, ಕಾರ್ಯದರ್ಶಿ ಹಾಗೂ ಇತರರು ಆರ್‌ಟಿಐ ಕಾರ್ಯಕರ್ತ ಗಂಗರಾಜು ದೂರು ದಾಖಲಿಸಿದ್ದಾರೆ.

ಅಲ್ಲದೆ ಬಿಇಎಂಎಲ್ ನೌಕರರು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಂಚೆ ಕಚೇರಿ ಹಾಗೂ ಸರಕಾರಿ ಪತ್ರಿಕಾ ನೌಕರರು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಬಳಿಕ ಗಂಗರಾಜು ಅವರು ಮುಡಾ ಸೈಟ್‌ಗಳನ್ನು ಹಿಂಪಡೆಯುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ 2017ರಲ್ಲಿ ಎಫ್‌ಐಆರ್‌ ದಾಖಲಿಸಲು ಅನುಮೋದನೆ ನೀಡಿತ್ತು. ನಂತರ, ಆಸ್ತಿ ರಕ್ಷಣೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣವನ್ನು 2022ರಲ್ಲಿ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿತ್ತು.

ಲೋಕಾಯುಕ್ತ ಕಚೇರಿ
'ಮುಡಾ' ಅಸ್ತ್ರಕ್ಕೆ ಪ್ರತ್ಯಸ್ತ್ರ ಸಿದ್ದ: BJP ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕು; ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com