ಕಲಬುರಗಿ: ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ದುರ್ಮರಣ

ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಖುಷಿ ಬಸ್‌ನಡಿಗೆ ಸಿಲುಕಿದ್ದು, ಆಕೆಯ ತಲೆ ಮೇಲೆ ಶಾಲಾ ಬಸ್ ಹರಿದಿದೆ.
ಖುಷಿ ಬನ್ನಟ್ಟಿ
ಖುಷಿ ಬನ್ನಟ್ಟಿ
Updated on

ಕಲಬುರಗಿ: ತಲೆ ಮೇಲೆ ಶಾಲಾ ವಾಹನ ಹರಿದ ಪರಿಣಾಮ 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ ಅಣ್ಣ ಬಂದಿದ್ದ ವೇಳೆ ಆತನನ್ನು ಕರೆದೊಯ್ಯಲು ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ ತಂದೆ ಈಕೆ ಬಂದಿರುವುದನ್ನು ಗಮನಿಸಿರಲಿಲ್ಲ. ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಖುಷಿ ಬಸ್‌ನಡಿಗೆ ಸಿಲುಕಿದ್ದು, ಆಕೆಯ ತಲೆ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ಬಳಿಕ ಶಾಲಾ ವಾಹನ ಚಾಲಕ ಶ್ರೀಶೈಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗಷ್ಟೇ ರಾಯಚೂರು ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಾಲ್ವರ ವಿದ್ಯಾರ್ಥಿಗಳಿಗೆ ಕಾಲು ತುಂಡಾಗಿತ್ತು. ಹಲವಾರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ಖುಷಿ ಬನ್ನಟ್ಟಿ
ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com