ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಜಗಳ, ತಾಯಿಯ ಕತ್ತು ಹಿಸುಕಿ ಕೊಂದ ಮಗಳ ಬಂಧನ

ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.
ಮೃತಪಟ್ಟ ಮಹಿಳೆ ಜಯಲಕ್ಷ್ಮಿ
ಮೃತಪಟ್ಟ ಮಹಿಳೆ ಜಯಲಕ್ಷ್ಮಿ
Updated on

ಬೆಂಗಳೂರು: ಬಾಡಿಗೆದಾರನೊಂದಿಗಿನ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ತಿಳಿದು ಜಗಳ ಮಾಡಿದ ಹೆತ್ತ ತಾಯಿಯನ್ನೇ ಮಗಳು ಕೊಂದಿರುವ ಘಟನೆ ಹೊಂಗಸಂದ್ರದಲ್ಲಿ ನಡೆದಿದೆ.

ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.

ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪವಿತ್ರಾ 11 ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು. ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.

ಮೃತಪಟ್ಟ ಮಹಿಳೆ ಜಯಲಕ್ಷ್ಮಿ
ಅತ್ತಿಗೆ ಜೊತೆಗಿನ ಅಕ್ರಮ ಸಂಬಂಧ ಪ್ರಶ್ನಿಸಿದ ಸಹೋದರಿಯನ್ನೇ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ, ಹತ್ಯೆ

ಈ ವರದಿಯ ನಂತರ ಪೊಲೀಸರಿಗೆ ಪವಿತ್ರಾಳ ಮೇಲೆ ಅನುಮಾನ ಮೂಡಿದ್ದು, ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಬಗ್ಗೆ ತಾಯಿ ಪ್ರಶ್ನಿಸಿದಾಗ ಟವೆಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸ್ ವಶದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com