ಯುವಕನಿಗೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣ: ರೌಡಿ ಶೀಟರ್ ಪವನ್ ಕಾಲಿಗೆ ಗುಂಡೇಟು, ಬಂಧನ!

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ.
ರೌಡಿ ಶೀಟರ್ ಪವನ್
ರೌಡಿ ಶೀಟರ್ ಪವನ್
Updated on

ಬೆಂಗಳೂರು: ಇತ್ತೀಚಿಗೆ ನಡುರಸ್ತೆಯನ್ನು ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ ಹಲ್ಲೆಗೈದಿದ್ದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬುನನ್ನು ಪೋಲಿಸರು ಬಂಧಿಸಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪವನ್ ಮೇಲೆ ಬಂಧನದ ವಾರಂಟ್ ಇದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ನಡುವೆ ಯುವಕನನ್ನು ನಡು ರಸ್ತೆಯಲ್ಲಿ ನಗ್ನಗೊಳಿಸಿ, ಹಲ್ಲೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಉಲ್ಲಾಳದ ಹಿಲ್‌ರಾಕ್ ಸ್ಕೂಲ್ ಬಳಿ ಆತನ ಬಂಧನಕ್ಕೆ ತೆರಳಿದ್ದರು. ಬಂಧನಕ್ಕೆ ವೇಳೆ ಕಡುಬು ಹೆಡ್ ಕಾನ್‌ಸ್ಟೇಬಲ್ ವೆಂಕಟೇಶ್ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾನೆ.

ಆತ್ಮರಕ್ಷಣೆಗಾಗಿ ರೌಡಿಯ ಬಲಗಾಲಿಗೆ ಗೋವಿಂದರಾಜ ನಗರದ ಇನ್ಸ್ ಪೆಕ್ಟರ್ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹೊಡೆದಿದ್ದಾರೆ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಕಡುಬುನನ್ನು ಬಂಧಿಸಿದ್ದಾರೆ. ಇನ್ನೂ ಬಂಧಿತ ರೌಡಿ ಶೀಟರ್ ಪವನ್ ಆಲಿಯಾಸ್ ಕಡುಬು ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.

ರೌಡಿ ಶೀಟರ್ ಪವನ್
ಬೆಂಗಳೂರು: ನಡು ರಸ್ತೆಯಲ್ಲಿ ಯುವಕನನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com