ಅದ್ಧೂರಿ ದಸರಾ ಆಚರಣೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ: ಆರ್.ಅಶೋಕ್

ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು.
ವಿಪಕ್ಷ ನಾಯಕ ಆರ್. ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್
Updated on

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಆರ್. ಅಶೋಕ್ ಸ್ವಾಗತಿಸಿದ್ದಾರೆ.

ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅಶೋಕ್, ಕಳೆದ ವರ್ಷ ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದಿದ್ದಾರೆ.

ವಿಪಕ್ಷ ನಾಯಕ ಆರ್. ಅಶೋಕ್
ಮೈಸೂರು ದಸರಾ 2024: ಜನರ ಉತ್ಸವ ಆಗಬೇಕು, ಈ ಬಾರಿ ಅದ್ದೂರಿಯಾಗಿ ಆಚರಣೆ- ಸಿಎಂ ಸಿದ್ದರಾಮಯ್ಯ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅಶೋಕ್, ಕಳೆದ ವರ್ಷ ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com