ದಾವಣಗೆರೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ

ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೆರವಣಿಗೆ ಸುಗಮವಾಗಿ ಸಾಗುತ್ತಿದ್ದು, ನಿನ್ನೆ ಸಂಜೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿದ್ದಾಗ ಕಲ್ಲು ತೂರಾಟ ಆರಂಭವಾಯಿತು. ಕೆಲವರು ಘೋಷಣೆಗಳನ್ನು ಕೂಗಿದ್ದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೇದೆಗಳಿಗೆ ಗಾಯಗಳಾಗಿವೆ.

ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ದಾವಣಗೆರೆ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ, ಪೊಲೀಸ್ ಸಿಬ್ಬಂದಿಗೂ ಗಾಯ

ಘಟನೆಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು 30 ಜನರನ್ನು ಬಂಧಿಸಲಾಗಿದೆ ಎಂದು ಉಮಾ ಪ್ರಶಾಂತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com