ಕೊತ್ತನೂರಿನಲ್ಲಿ 22.08 ಎಕರೆ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ.
ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ
Updated on

ಬೆಂಗಳೂರು: ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ. ಆದರೆ, ಈ ಹಿಂದೆ ಬೆಂಗಳೂರು ನಗರದಲ್ಲಿ ಕಾರ್ಯ ನಿರ್ವಹಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಇಲಾಖೆಗೆ ಮಂಜೂರಾದ ಭೂಮಿಯನ್ನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಈಶ್ವರ್ ಖಂಡ್ರೆ
ತಿಪ್ಪಗೊಂಡನಹಳ್ಳಿ ಜಲಾಶಯದ ನೀರನ್ನು ಕೈಗಾರಿಕೆ ಬಳಕೆಗೆ ನೀಡಿ: ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ

ಪ್ರಸ್ತುತ ಈ ಸರ್ವೆ ನಂಬರ್'ಗೆ ಸಂಬಂಧಿಸಿದಂತೆ ಪಹಗಣಿ (ಆರ್.ಟಿ.ಸಿ)ಯಲ್ಲಿ ಒಟ್ಟು 13 ಎಕರೆ 10 ಗುಂಟೆ (4 ಎಕರೆ, 1,02 ಎಕರೆ ಮತ್ತು 8,08 ಎಕರೆ) ಬೆಂಗಳೂರುಪ ಜಿಲ್ಲಾಧಿಕಾರಿಗಳ ಆದೇಶದಂತೆ ಎಂ.ಆರ್ ಆಗಿರುತ್ತದೆ. ಸದರಿ 22 ಎಕರೆ 8 ಗುಂಟೆ ಭೂಮಿಯ ಸಂಪೂರ್ಣ ದಾಖಲೆಗಳನ್ನು ಪಡೆದುಕೊಂಡು, ಅರಣ್ಯ ಒತ್ತುವರಿ ತೆರವಿಗೆ 64ಎ ಸೆಕ್ಷನ್ ಅಡಿಯಲ್ಲಿ ಕ್ರಮ ವಹಿಸಲು ಕೂಲೇ ಕ್ರಮ ವಹಿಸುವಂತೆ ಸೂಚಿಸಲು ಮತ್ತು ಈ ಸಂಬಂಧ ಈ ವರೆಗೂ ಕೈಗೊಂಡಿರುವ ಕ್ರಮದ ವಿವರವನ್ನು 2 ದಿನಗಳ ಒಳಗಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com