ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ಕೇರಳದ ಚಾಲಕ ಅರ್ಜುನ್ ಮೃತದೇಹ ಪತ್ತೆ

ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು.
ಶೋಧ ಕಾರ್ಯಾಚರಣೆ
ಶೋಧ ಕಾರ್ಯಾಚರಣೆ
Updated on

ಕಾರವಾರ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದೆ.

ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ.

ಗಂಗಾವಳಿ ನದಿಯಿಂದ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದನ್ನು ಮೇಲೆತ್ತುವ ವೇಳೆ ಲಾರಿಯಲ್ಲೇ ಅರ್ಜುನ್ ಮೃತದೇಹ ಪತ್ತೆಯಾಗಿದೆ. ಇನ್ನು ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ. ಇದೇ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದ್ದು ಅದು ಯಾರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.

ಲಾರಿ ಕ್ಯಾಬಿನ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಕಾರವಾರದ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ತಿಳಿಸಿದ್ದಾರೆ. ಅರ್ಜುನ್ ಶವ ಪತ್ತೆಯಾಗುವುದರೊಂದಿಗೆ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ.

ಶೋಧ ಕಾರ್ಯಾಚರಣೆ
ಶಿರೂರು ಭೂಕುಸಿತ: ಗ್ಯಾಸ್ ಟ್ಯಾಂಕರ್ ಭಾಗಗಳು ಪತ್ತೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com