ಉಡುಪಿ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮಂಗಳವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಮೃತ ವಿದ್ಯಾರ್ಥಿಗಳು
ಮೃತ ವಿದ್ಯಾರ್ಥಿಗಳು
Updated on

ಉಡುಪಿ: ಉಡುಪಿ ಜಿಲ್ಲೆಯ ಯಡ್ತರೆ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಶಾಲಾ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಬೈಂದೂರು ಯೋಜನಾ ನಗರದ ನಿವಾಸಿ‌ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ ಶಾನು ಶಾಲಿಯಾನ್ ಅವರ ಪುತ್ರ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದ್ದು, ಇಬ್ಬರೂ ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿದ್ದರು.

ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮಂಗಳವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮೃತ ವಿದ್ಯಾರ್ಥಿಗಳು
Karnataka Weather: ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಉಡುಪಿ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌

ಮಂಗಳವಾರ ಬಾಲಕರು ತಮ್ಮ ಶಾಲಾ ಪರೀಕ್ಷೆಗಳನ್ನು ಪೂರ್ಣಗೊಳಿಸಿದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿರಾಮಕ್ಕಾಗಿ ಉತ್ಸುಕರಾಗಿದ್ದ ವಿದ್ಯಾರ್ಥಿಗಳು, ಯಡ್ತರೆ ಗ್ರಾಮದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಆದರೆ ಇಬ್ಬರಿಗೂ ಸರಿಯಾಗಿ ಈಜು ಬಾರದ ಪರಿಣಾಮ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com