ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯ ಆದೇಶ: ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರೊಂದಿಗೆ ಸಮಾಲೋಚನೆ

ದೆಹಲಿಯಲ್ಲಿರುವ ನಮ್ಮ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರ ಸಲಹೆಯನ್ನು ಪಡೆಯಲು ಪ್ರಯತ್ನಿಸುತ್ತಿದ್ದು, ಒಂದೆರಡು ದಿನಗಳಲ್ಲಿ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ.
Published on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಎತ್ತಿಹಿಡಿದಿರುವ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಹಿರಿಯ ವಕೀಲರು ಮತ್ತು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮುಖ ಕಾನೂನು ಸಲಹೆಗಾರರು ತಿಳಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಮೊನ್ನೆ ಬುಧವಾರ ಆದೇಶಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಹೆಸರಿಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶ ಹೊರಬಿದ್ದಿದೆ.

ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ, ಯಾವುದೇ ತನಿಖೆಯಾಗಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಕಾನೂನುಬದ್ಧವಾಗಿ ನಡೆದಿರುವ ಕೆಲವು ಲೋಪದೋಷಗಳನ್ನು ಸರಿಪಡಿಸಬೇಕು, ಇದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಶಾಸಕ, ಹಿರಿಯ ವಕೀಲರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಇಂದು ಸುದ್ದಿಗಾರರಿಗೆ ತಿಳಿಸಿದರು.

ವಕೀಲರು ಮತ್ತು ಹಿರಿಯ ವಕೀಲರೊಂದಿಗೆ ಚರ್ಚೆ ನಡೆಯುತ್ತಿದೆ. ಪ್ರಕರಣದಲ್ಲಿ ವಾದ ಮಂಡಿಸಿದ ದೆಹಲಿಯಲ್ಲಿರುವ ನಮ್ಮ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರ ಸಲಹೆಯನ್ನು ಪಡೆಯಲು ಪ್ರಯತ್ನಿಸುತ್ತಿದ್ದು, ಒಂದೆರಡು ದಿನಗಳಲ್ಲಿ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ
ನಾನು ಏನೂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಮಾತನಾಡಿದ ಪೊನ್ನಣ್ಣ, ರಾಜ್ಯಪಾಲರ ಮನವೊಲಿಕೆ ಇಲ್ಲ ಎಂಬುದು ನಮ್ಮ ವಾದವಾಗಿತ್ತು.ಮನಸ್ಸಿನ ಅನ್ವಯ ಎಂಬ ಈ ಕಾನೂನು ತತ್ವ ರಾಜ್ಯಪಾಲರಿಗೆ ಮಾತ್ರ ಸೀಮಿತವಲ್ಲ, ನ್ಯಾಯಾಲಯಕ್ಕೂ ಅನ್ವಯಿಸುತ್ತದೆ ಎಂದರು.

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಅನ್ವಯ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಸಿಎಂ ವಿರುದ್ಧದ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ. ಯಾವುದೇ ತನಿಖೆ ಅಥವಾ ವಿಚಾರಣೆ ನಡೆಯಲಿ, ಸತ್ಯವನ್ನು ಮರೆಮಾಡಲು ಸಾಧ್ಯವಿಲ್ಲ ಎಂದು ಪೊನ್ನಣ್ಣ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com