ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಆಗ್ರಹಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ

ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಲೋಕಾಯುಕ್ತರು ಪಾರದರ್ಶಕ ತನಿಖೆ ನಡೆಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದ್ದರಿಂದ ಮುಡಾ ಭೂ ಹಗರಣದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಸ್ನೇಹಮಯಿ ಕೃಷ್ಣ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಸ್ನೇಹಮಯಿ ಕೃಷ್ಣ
ಸ್ನೇಹಮಯಿ ಕೃಷ್ಣ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಭೂ ಹಗರಣ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಲೋಕಾಯುಕ್ತರು ಪಾರದರ್ಶಕ ತನಿಖೆ ನಡೆಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದ್ದರಿಂದ ಮುಡಾ ಭೂ ಹಗರಣದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಸ್ನೇಹಮಯಿ ಕೃಷ್ಣ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆ ರಾಜ್ಯ ಸರ್ಕಾರದ ಅಧೀನದಲ್ಲಿದೆ, ಅಧಿಕಾರಿಗಳು ಸರ್ಕಾರದಿಂದ ಗೊತ್ತುಪಡಿಸುತ್ತಾರೆ. ಇದರಿಂದ ಪ್ರಕರಣದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯ ಬಗ್ಗೆ ನಮಗೆ ವಿಶ್ವಾಸವಿಲ್ಲ ಎಂದರು.

ಎಫ್‌ಐಆರ್‌ ದಾಖಲಾದ ನಂತರ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ ಮೊರೆ ಹೋಗುತ್ತೇನೆ ಎಂದು ಕೃಷ್ಣ ಹೇಳಿದ್ದರು. ಬುಧವಾರ ಲೋಕಾಯುಕ್ತ ತನಿಖೆಗೆ ಆದೇಶ ಬಂದ ನಂತರ ಮೈಸೂರಿನ ಲೋಕಾಯುಕ್ತ ಎಸ್‌ಪಿ ಕಚೇರಿಗೆ ತೀರ್ಪು ಪ್ರತಿ ನೀಡಲು ಬಂದಿದ್ದೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬೆಳಗ್ಗೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕಾದು ನಂತರ ಲೋಕಾಯುಕ್ತ ಎಸ್ಪಿ ಉದೇಶ್ ನಾಪತ್ತೆಯಾಗಿದ್ದಾರೆ ಎಂದು ದೇವರಾಜ ಠಾಣೆಗೆ ದೂರು ಸಲ್ಲಿಸಿದರು.ಸಲ್ಲಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನಿಂದ ಮಾಹಿತಿ ಪಡೆಯುವ ಸೌಜನ್ಯವೂ ಲೋಕಾಯುಕ್ತ ಅಧಿಕಾರಿಗಳಿಗೆ ಇಲ್ಲ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯನವರು ಹಣ, ಆಸ್ತಿ ಮೇಲೆ ಪ್ರೀತಿ ಬೆಳೆಸಿಕೊಂಡಿದ್ದಾರೆ, ರಾಜೀನಾಮೆ ನೀಡಿ ತನಿಖೆ ಎದುರಿಸಲಿ, ಇನ್ನು ಮುಂದೆ ಯಾರೂ ಅವರ ಮೇಲೆ ಅಪಪ್ರಚಾರ ಮಾಡುವ ಪ್ರಯತ್ನ ಮಾಡಬೇಡಿ, ತನಗೆ ತಾನೇ ಹಾನಿ ಮಾಡಿಕೊಳ್ಳುತ್ತಿದ್ದಾರೆ ಎಂದು ಕೃಷ್ಣ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com