ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಾಜಿ ಸೈನಿಕನ ಬಂಧನ

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಮದ್ಯದ ಅಮಲಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 65 ವರ್ಷದ ಭಾರತೀಯ ಸೇನೆಯ ನಿವೃತ್ತ ಸೈನಿಕನನ್ನು ಗಂಗಮ್ಮನಗುಡಿ ಪೋಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಮದ್ಯದ ಅಮಲಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 65 ವರ್ಷದ ಭಾರತೀಯ ಸೇನೆಯ ನಿವೃತ್ತ ಸೈನಿಕನನ್ನು ಗಂಗಮ್ಮನಗುಡಿ ಪೋಲೀಸರು ಬಂಧಿಸಿದ್ದಾರೆ.

ಅಬ್ಬಿಗೆರೆ ನಿವಾಸಿ ಪರಶುರಾಮ್ ಮಾಜಿ ಸೈನಿಕ. ಇವರ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. 31 ವರ್ಷದ ಸೂರಜ್ ಮನೆಗೆ ಹೋಗಿ ಮಂಗಳವಾರ ಮತ್ತು ಆತನ ಕುಟುಂಬ ಸದಸ್ಯರೊಂದಿಗೆ ಜಗಳವಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮತ್ತು ಸೂರಜ್ ಕುಟುಂಬ ಸ್ನೇಹಿತರಾಗಿದ್ದು ಉತ್ತಮ ಬಾಂಧವ್ಯ ಹೊಂದಿದ್ದರು. ಆದರೆ ನಂತರ ಕೆಲವು ವಿವಾದಗಳಿಂದ ಅವರ ಸಂಬಂಧವು ಹಳಸಿತ್ತು ಎಂದು ಅವರು ಹೇಳಿದರು. ಸೂರಜ್ ಅವರ ಮನೆಗೆ ಪರಶುರಾಮ್ ಬಂದಾಗ ಮನೆ ಪ್ರವೇಶಿಸದಂತೆ ತಡೆದಾಗ, ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಕೋಪದ ಭರದಲ್ಲಿ, ಮತ್ತು ಮದ್ಯದ ಅಮಲಿನಲ್ಲಿದ್ದ, ಪರಶುರಾಮ್ ತನ್ನ ಪರವಾನಗಿ ಪಡೆದ ರಿವಾಲ್ವರ್  ತೆಗೆದುಕೊಂಡು ಸೂರಜ್ ಕಡೆ ಗುರಿಯಿಟ್ಟಿದ್ದಾರೆ. ನಂತರ ಆರೋಪಿ ಗಾಳಿಯಲ್ಲಿ ಗುಂಡು ಹಾರಿಸಿದಾಗ ಭಯಭೀತರಾಗಿದ್ದಾರೆ ನಂತರ, ಅಕ್ಕಪಕ್ಕದವರು ಪರಶುರಾಮನನ್ನು ಸಮಾಧಾನಪಡಿಸಿದರು.

ಅಷ್ಟರಲ್ಲಿ ಸೂರಜ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಶುರಾಮ್ ನನ್ನು ಬಂಧಿಸಿ ರಿವಾಲ್ವರ್ ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪರಶುರಾಮ್‌ಗೆ ಕಳೆದ ಕೆಲವು ವರ್ಷಗಳಿಂದ ತನ್ನ ಕುಟುಂಬದ ಪರಿಚಯವಿದ್ದು, ಮದ್ಯದ ಅಮಲಿನಲ್ಲಿ ಪದೇ ಪದೇ ಮನೆಗೆ ಭೇಟಿ ನೀಡುತ್ತಿದ್ದು, ಕ್ಷುಲ್ಲಕ ವಿಚಾರಗಳಿಗೆ ಜಗಳವಾಡುತ್ತಿದ್ದ ಎಂದು ಸೂರಜ್ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ನಾವು ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ," ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com