ವಂಟಮುರಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ಓಡಿಹೋಗಿದ್ದ ಜೋಡಿ ಕೊನೆಗೂ ವಿವಾಹ

2023 ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆಗೆ ಕಾರಣವಾಗಿದ್ದ ಪ್ರೇಮಿಗಳು ಕೊನೆಗೂ ಮಂಗಳವಾರ ಅಧಿಕೃತವಾಗಿ ಮದುವೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: 2023 ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆಗೆ ಕಾರಣವಾಗಿದ್ದ ಪ್ರೇಮಿಗಳು ಕೊನೆಗೂ ಮಂಗಳವಾರ ಅಧಿಕೃತವಾಗಿ ಮದುವೆಯಾಗಿದ್ದಾರೆ.

ಓಡಿಹೋಗಿದ್ದ ಜೋಡಿ ಪರಸ್ಪರ ಒಪ್ಪಿಗೆಯೊಂದಿಗೆ ವಿವಾಹವಾಗಿದ್ದು, ಬೆಳಗಾವಿಯ ದಕ್ಷಿಣ ವಲಯ ಉಪನೋಂದಣಿ ಕಚೇರಿಯಲ್ಲಿ ಮದವೆಯನ್ನು ನೋಂದಾಯಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
 
ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಯುವತಿ ಮತ್ತು ಯುವಕ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಹುಡುಗಿಯ ಮನೆಯವರು ಡಿಸೆಂಬರ್ 12, 2023 ರಂದು ಹುಡುಗಿಗೆ ಇನ್ನೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥ ನಿಗದಿಪಡಿಸಿದ್ದರು. ಇದನ್ನು ತಿಳಿದ ನಂತರ, ಹುಡುಗಿ ತಾನು ಪ್ರೀತಿಸುತ್ತಿದ್ದ ಹುಡುಗನ ಜೊತೆ ಹಿಂದಿನ ರಾತ್ರಿ ಓಡಿಹೋಗಿದ್ದರು.

ಈ ವಿಷಯ ತಿಳಿದ ನಂತರ ಕೋಪಗೊಂಡ ಹುಡುಗಿಯ ಪೋಷಕರು ಹುಡುಗನ ಮನೆಗೆ ತೆರಳಿ ಅವರ ಮನೆಯನ್ನು ಧ್ವಂಸಗೊಳಿಸಿದ್ದರು. ಅಲ್ಲದೆ ಯುವತಿಯ ತಾಯಿಯನ್ನು ಥಳಿಸಿ, ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕುವ ಮೂಲಕ ಇಡೀ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com