ರಾಜ್ಯ
ಸಿಎಂ ಸಚಿವಾಲಯದಲ್ಲಿನ 30 ಸಿಬ್ಬಂದಿಯನ್ನು ಕಿತ್ತೆಸೆದ ಸಿದ್ದರಾಮಯ್ಯ ಸರ್ಕಾರ!
ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು: ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. ಇಂದು ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ