representational image
ಸಾಂದರ್ಭಿಕ ಚಿತ್ರ

ರಾಯಚೂರು: ಮಸ್ಕಿ ಕಾಂಗ್ರೆಸ್​ ಶಾಸಕನ ಪುತ್ರ, ಸಹೋದರನಿಂದ ಮೊಲಗಳ ಬೇಟೆ- ಮೆರವಣಿಗೆ; ಕೇಸ್ ದಾಖಲು

ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್​ ಆಗಿದೆ
Published on

ರಾಯಚೂರು: ಬೇಟೆಯಾಡಿದ ಕಾಡು ಮೊಲಗಳೊಂದಿಗೆ ಸಾರ್ವಜನಿಕವಾಗಿ ಮೆರವಣಿಗೆ ನಡೆಸುತ್ತಿರುವ ವೀಡಿಯೊಗಳು ಕಾಣಿಸಿಕೊಂಡ ನಂತರ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ್ ಅವರ ಪುತ್ರ ಸತೀಶ್ ಗೌಡ, ಅವರ ಸಹೋದರ ಸೇರಿದಂತೆ ಹಲವರ ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರ್ವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಈ ಮೂಲಕ ಶಾಸಕರ ಪುತ್ರ ಸತೀಶ್​​ಗೌಡ, ಸಹೋದರ ಸಿದ್ದನಗೌಡ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ.

ಶಾಸಕರ ಪುತ್ರ, ಸಹೋದರನ ನೇತೃತ್ವದಲ್ಲಿ ಮೊಲಗಳನ್ನು ಬೇಟೆಯಾಡಲಾಗಿದೆ. ಬಳಿಕ, ಮೊಲಗಳ ಕಳೆಬರಹವನ್ನು ಕಟ್ಟಿಗೆಗಳಿಗೆ ಕಟ್ಟಿ ಸಿಂಧನೂರು ತಾಲೂಕಿನ ‌ತುರ್ವಿಹಾಳ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಗಿದೆ. ಅಲ್ಲದೇ, ಖಡ್ಗ ಮತ್ತು ಕೊಡಲಿ ಪ್ರದರ್ಶನ ಮಾಡಲಾಗಿದೆ.

ಘಟನೆ ಸಂಬಂಧ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶ್ ಗೌಡ ಹಾಗೂ ಸಹೋದರ ಸಿದ್ದನಗೌಡ ಹಾಗೂ ದುರ್ಗೇಶ್ ಸೇರಿ ಹಲವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

ಘಟನೆ ಸಂಬಂಧ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾತನಾಡಿ, ಮೊಲಗಳನ್ನು ಮೆರವಣಿಗೆ ಮಾಡುವ ವಿಡಿಯೋ ವೈರಲ್ ಆಗಿದೆ. ಈಗಾಗಲೇ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲಿ, ಪ್ರಕರಣ ದಾಖಲಾದ ಬಳಿಕ ಮುಂದಿನ ಹಂತದಲ್ಲಿ ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.

representational image
ಉಡುಪಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ; ಯುವಕನ ವಿರುದ್ಧ ಕೇಸ್ ದಾಖಲು, ಲವ್ ಜಿಹಾದ್ ಆರೋಪ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com